ಮಾಜಿ ಅಧ್ಯಕ್ಷ ಬಿ.ಆರ್.ಉದಯ್ ಕುಮಾರ್ ಅಭಿಪ್ರಾಯ
ಪ್ರತಿನಿಧಿ ವರದಿ ಹಾಸನ
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕೇರಂ ಕ್ರೀಡಾಕೂಟವನ್ನು ಸಂಘದ ಅಧ್ಯಕ್ಷ ಕೆ.ಎಚ್.ವೇಣುಕುಮಾರ್ ಹಾಗೂ ಮಾಜಿ ಅಧ್ಯಕ್ಷ ಬಿ.ಆರ್.ಉದಯ್ ಕುಮಾರ್ ಉದ್ಘಾಟಿಸಿದರು.
ಬಳಿಕ ಮಾಜಿ ಅಧ್ಯಕ್ಷ ಬಿ.ಆರ್. ಉದಯ್ ಕುಮಾರ್ ಮಾತನಾಡಿ, ಪತ್ರಕರ್ತರು ಎಂದರೇ ತಮ್ಮ ವೃತ್ತಿ ಜೀವನದಲ್ಲಿ ಸದಾ ಒತ್ತಡದಲ್ಲಿ ಕೆಲಸ ಮಾಡುತ್ತಿರುತ್ತಾರೆ. ಆದರೆ ಬಿಡುವಿನ ಸಮಯ ಮಾಡಿಕೊಂಡು ಇಂತಹ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ನಮ್ಮಲ್ಲಿನ ಭಾವನಾತ್ಮಕ ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ ಎಂದರು.
ಕೆಲವೊಮ್ಮೆ ಕ್ಷುಲ್ಲಕ ಕಾರಣಗಳಿಗೆ ಪತ್ರಕರ್ತರ ನಡುವೆ ವೈಮನಸ್ಸು ಉಂಟಾಗಬಹುದು. ಆದರೆ ಇಂತಹ ಕ್ರೀಡಾ ಚಟುವಟಿಕೆಗಳು ಅವುಗಳನ್ನೆಲ್ಲ ತೊಡೆದುಹಾಕಿ ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ. ಈ ನಿಟ್ಟಿನಲ್ಲಿ ಇನ್ನಷ್ಟು ಕ್ರೀಡಾ ಚಟುವಟಿಕೆಗಳು ನಡೆಯಬೇಕು ಎಂದು ಹೇಳಿದರು.
ಅಧ್ಯಕ್ಷ ಕೆ.ಹೆಚ್. ವೇಣು ಕುಮಾರ್ ಮಾತನಾಡಿ, ಸೌಹಾರ್ದತೆ ಹಾಗೂ ಸಹೋದರತ್ವ ಬೆಳೆಸುವ ನಿಟ್ಟಿನಲ್ಲಿ ಕ್ರೀಡಾಕೂಟಗಳು ಸಹಾಯಕವಾಗುತ್ತದೆ. ಕಳೆದ ವಾರ ನಡೆದ ಕ್ರಿಕೆಟ್ ಹಾಗೂ ಇನ್ನಿತರ ಕ್ರೀಡೆಗಳಲ್ಲಿ ಕೂಡ ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಿದ್ದೀರಿ. ಅದೇ ರೀತಿ ಮುಂದಿನ ಕ್ರೀಡೆಗಳನ್ನು ಕೂಡ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಲು ಸಹಕರಿಸುವಂತೆ ಮನವಿ ಮಾಡಿದರು. ಕ್ರೀಡೆಗಳಲ್ಲಿ ಗೆಲುವು ಸೋಲು ಸಾಮಾನ್ಯ. ಎಲ್ಲವನ್ನೂ ಸಮಾನವಾಗಿ ಸ್ವೀಕರಿಸಬೇಕು, ಶಾಂತಿಯುತವಾಗಿ ಎಲ್ಲರೂ ಕ್ರೀಡೆಗಳಲ್ಲಿ ಪಾಲ್ಗೊಂಡು ಸಹಕಾರ ನೀಡಬೇಕು ಎಂದು ಹೇಳಿದರು.
ಉಪಾಧ್ಯಕ್ಷ ಕೆ.ಎಂ. ಹರೀಶ್, ಪ್ರಧಾನ ಕಾರ್ಯದರ್ಶಿ ಬಿ.ಸಿ. ಶಶಿಧರ್, ಕಾರ್ಯದರ್ಶಿ ನಟರಾಜ್, ಸಿ.ಬಿ. ಸಂತೋಷ್, .ಪಿ.ಎ. ಶ್ರೀನಿವಾಸ್, ತೋಫಿಕ್ ಇತರರು ಉಪಸ್ಥಿತರಿದ್ದರು.