ಆಕಾಶ್ ಸಮೂಹ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಮುನಿರಾಜು ಅಭಿಪ್ರಾಯ
ದೇವನಹಳ್ಳಿ : ಜನರಲ್ಲಿ ಪರಿಸರ ಜಾಗೃತಿ ಮೂಡಿಸುವ ಸಲುವಾಗಿ ಪರಿಸರ ದಿನವನ್ನು ಆಚರಿಸಲಾಗುತ್ತಿದೆ ಎಂದು ಆಕಾಶ್ ಸಮೂಹ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಮುನಿರಾಜು ತಿಳಿಸಿದರು.
ದೇವನಹಳ್ಳಿ ಪಟ್ಟಣದ ಪ್ರಸನ್ನ ಹಳ್ಳಿ ರಸ್ತೆಯಲ್ಲಿರುವ ಆಕಾಶ್ ಸಮೂಹ ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿಗಳು , ಶಾಲಾ ವಿದ್ಯಾರ್ಥಿಗಳು ಮತ್ತು ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿಗಳು ಒಗ್ಗೂಡಿ ನಡೆಸಿದ “ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
ಮನುಷ್ಯ ತನ್ನ ಬೇಡಿಕೆಗಳ ಈಡೇರಿಕೆಗಾಗಿ ಗಿಡ-ಮರಗಳನ್ನು ಕಡಿಯುತ್ತಿದ್ದಾನೆ. ಪರಿಣಾಮ ಭವಿಷ್ಯದ ಮಕ್ಕಳಿಗೆ ಹಾನಿಯುಂಟು ಮಾಡುತ್ತದೆ ಹಾಗಾಗಿ ಕೇವಲ ಪರಿಸರ ದಿನಾಚರಣೆಗೆ ಸೀಮಿತವಾಗದೆ. ಪ್ರತಿದಿನ ಪರಿಸರದ ಕಾಳಜಿ ಗಿಡ -ಮರ ಪ್ರಾಣಿ -ಪಕ್ಷಿಗಳ ಕುರಿತು ಕಾಳಜಿ ವಹಿಸುವುದು ನಮ್ಮ ಕರ್ತವ್ಯ ಎಂದು ತಿಳಿಸಿದರು.
ಆಕಾಶ್ ಸಮೂಹ ಸಂಸ್ಥೆಯ ಶಾಲಾ ವಿಭಾಗದ ಪ್ರಾಂಶುಪಾಲ ಶಿವುಪ್ರಸಾದ್ ಮಾತನಾಡಿ, ಹೆಚ್ಚಿನ ಜನರು ಪರಿಸರದ ಮಹತ್ವ ಅರ್ಥಮಾಡಿಕೊಳ್ಳುವುದಿಲ್ಲ ಮತ್ತು ತಮ್ಮ ವಿವಿಧ ಚಟುವಟಿಕೆಗಳಿಂದ ಅದನ್ನು ಹಾನಿಗೊಳಿಸುತ್ತಾರೆ. ನಾವು ಪರಿಸರವನ್ನು ಹಾಳು ಮಾಡುವುದನ್ನು ಮುಂದುವರಿಸಿದರೆ ದೀರ್ಘಾವಧಿಯಲ್ಲಿ, ದುಷ್ಪರಿಣಾಮಗಳು ಮನುಷ್ಯರ ಮೇಲೂ ಪರಿಣಾಮ ಬೀರುತ್ತವೆ ಎನ್ನುತ್ತಾರೆ.
ಪುರಸಭಾ ಸದಸ್ಯ ಎನ್ .ರಘು, ಸಿಬಿಎಸ್ಇ ವಿಭಾಗದ ಪ್ರಾಂಶುಪಾಲರಾದ ಅರ್ಪಿತಾ ಶ್ರೀವಾತ್ಸವ್ , ಐಸಿಎಸ್ಇ ವಿಭಾಗದ ಪ್ರಾಂಶುಪಾಲರಾದ ಮಮತಾ ಉಳ್ಳಾಲ್ ಭಾಗವಹಿಸಿದ್ದರು.
5ಡಿಎಚ್ಎಲ್ ಪಿ -೧
ದೇವನಹಳ್ಳಿ ಪಟ್ಟಣದ ಪ್ರಸನ್ನ ಹಳ್ಳಿ ರಸ್ತೆಯಲ್ಲಿರುವ ಆಕಾಶ್ ಸಮೂಹ ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿಗಳು ,ಶಾಲಾ ವಿದ್ಯಾರ್ಥಿಗಳು ಮತ್ತು ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿಗಳು ಒಗ್ಗೂಡಿ ನಡೆಸಿದ ಆಕಾಶ್ ಸಮೂಹ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಮುನಿರಾಜು ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ಕೊಟ್ಟರು.