ಸೋಮವಾರಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಮೀಪದ ಬಳಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಮಾಹಿತಿ ಜಾಗೃತಿ ಕಾರ್ಯಕ್ರಮ ನಡೆಯಿತು.
ಬೇಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್.ಆರ್.ಮೋಹನ ಮಾತನಾಡಿ, ಗ್ರಾಮ ಪಂಚಾಯಿತಿಯಲ್ಲಿ ಕಸ ಸಂಗ್ರಹಣೆ ಮಾಡಲಾಗುತ್ತಿದ್ದು, ಒಣ ಕಸ ಹಾಗು ಹಸಿ ಕಸ ವಿಂಗಡಿಸಿ ನೀಡುವಂತೆ ಮನವಿ ಮಾಡಿದರು. ಮಕ್ಕಳು ಪ್ಲಾಸ್ಟಿಕ್, ರಾಸಾಯನಿಕ ವಸ್ತುಗಳನ್ನು ಬಳಸಬಾರದು, ಪರಿಸರದ ಬಗ್ಗೆ ಕಾಳಜಿ ವಹಿಸುವಂತೆ ತಿಳಿಸಿದರು.
ಪೊಲೀಸ್ ಇಲಾಖೆಯ ಶಶಿಕುಮಾರ್, ಶಾಲೆಯ ಮುಖ್ಯಶಿಕ್ಷಕಿ ಭಾಗ್ಯ, ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ರಷಿದ್, ಆಶಾ ಕಾರ್ಯಕರ್ತೆ ಬಿ.ಆರ್.ಶಾರದ, ಶಾಂತಳ್ಳಿ ವಲಯದ ಮೇಲ್ವಿಚಾರಕ ಲಕ್ಷ್ಮಣ್, ಕೃಷಿ ಮೇಲ್ವಿಚಾರಕ ರಾಜಣ್ಣ, ಸೇವಾ ಪ್ರತಿನಿಧಿ ಸುನಿತಾ ಇದ್ದರು.
ಚಿತ್ರ : ಸೋಮವಾರಪೇಟೆ ಸಮೀಪದ ಬಳಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಿಸರ ಮಾಹಿತಿ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅತಿಥಿಗಳು. ಮೋಹನ್, ಭಾಗ್ಯ, ಶಶಿಕುಮಾರ್, ರಷಿದ್ ಇದ್ದರು.
——————-
ನಿವೃತ್ತ ನೌಕರರ ಸಂಘದ ರಜತ ಮಹೋತ್ಸವ
ಸೋಮವಾರಪೇಟೆ: ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ರಜತ ಮಹೋತ್ಸವ ಹಾಗು ವಾರ್ಷಿಕ ಮಹಾಸಭೆ ಜೂ. ೧೮ರಂದು ಮಹಿಳಾ ಸಮಾಜದ ಸಭಾಂಗಣದಲ್ಲಿ ಬೆಳಿಗ್ಗೆ ೧೦-೩೦ಕ್ಕೆ ನಡೆಯಲಿದೆ.
ಸಭೆಯಲ್ಲಿ ಸಂಘದ ಹಿರಿಯ ಸದಸ್ಯರುಗಳಾದ ಎಂ.ಎಸ್.ಶಿವಮೂರ್ತಿ, ಜಿ.ಎಸ್.ಹೂವಯ್ಯ, ಎಚ್.ಕೆ.ಕುಟ್ಟಪ್ಪ, ಎ.ಯು.ವಿಶಾಲಾಕ್ಷಿ, ಗೌರಮ್ಮ, ಎಸ್.ಆರ್.ಪುಟ್ಟಣಯ್ಯ, ಡಿ.ಪಿ.ಲೇಶಮ್ಮ, ಬಿ.ಎನ್.ರಂಗಸ್ವಾಮಿ, ಡಿ.ಎಸ್.ಸದಾಶಿವ, ಎಚ್.ಎಸ್.ಗುಂಡಪ್ಪ, ಕೆ.ಕೆ.ಅಯ್ಯಪ್ಪ ಮತ್ತು ಕೆ.ಎಸ್.ನಾಗರಾಜು ಅವರುಗಳನ್ನು ಸನ್ಮಾನಿಸಲಾಗುವುದು ಎಂದು ಸಂಘದ ಕಾರ್ಯದರ್ಶಿ ಬಿ.ಎಂ. ಆನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸಿ.ಕೆ.ಮಲ್ಲಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಂಘದ ಅಧ್ಯಕ್ಷ ಬಿ.ಬಿ. ಮಾದಮಯ್ಯ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರದೀಪ್ ಉಪಸ್ಥಿತರಿರುವರು.