ಪ್ರತಿನಿಧಿ ವರದಿ ಮಂಡ್ಯ
ಪರಿಸರ ರೂರಲ್ ಡೆವಲಪ್ಮೆಂಟ್ ಸೊಸೈಟಿ, ಮೈಸೂರಿನ ಅರಣ್ಯ ಇಲಾಖೆ ವನ್ಯಜೀವಿ ವಿಭಾಗ ಹಾಗೂ ಬನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ವತಿಯಿಂದ ವಿಶ್ವ ಅರಣ್ಯ ದಿನ, ವಿಶ್ವ ಜಲದಿನದ ನಿಮಿತ್ತ ‘ಪರಿಸರ ನಡಿಗೆ’ ಕಾರ್ಯಕ್ರಮವನ್ನು ಮಾ. ೨೩ರ ಬೆಳಗ್ಗೆ ೯ ಗಂಟೆಗೆ ಶ್ರೀರಂಗಪಟ್ಟಣ ತಾಲ್ಲೂಕಿನ ಗೆಂಡೇಹೊಸಹಳ್ಳಿಯ ಪಕ್ಷಿಧಾಮದಲ್ಲಿ ಹಮ್ಮಿಕೊಳ್ಳಲಾಗಿದೆ.
ಪರಿಸರ ನಡಿಗೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ಸಸ್ಯ ಸಂಕುಲ, ಪಕ್ಷಿ ಸಂಕುಲಗಳ ಪರಿಚಯ, ಎನ್ಎಸ್ ಎಸ್ ಸ್ವಯಂ ಸೇವಕರುಗಳಿಂದ ಪ್ಲಾಸ್ಟಿಕ್ ನಿಷೇಧ ಕುರಿತು ಶ್ರಮದಾನ, ಜನಪದ ಕಲಾವಿದರುಗಳಿಂದ ಪರಿಸರ ಜಾಗೃತಿ ಮೂಡಿಸುವ ಗೀತಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಪರಿಸರ ರೂರಲ್ ಡೆವಲಪ್ಮೆಂಟ್ ಸೊಸೈಟಿ ಅಧ್ಯಕ್ಷ ಮಂಗಲ ಎಂ.ಯೋಗೀಶ್ ತಿಳಿಸಿದ್ದಾರೆ.