ಶಿವಮೊಗ್ಗ : ನಾನು ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ. ನಾನು ಗೆದ್ದ ನಂತರ ಪ್ರಧಾನಿ ಮೋದಿ ಬಳಿ ಹೋಗಿಯೇ ಹೋಗುತ್ತೇನೆ ಎಂದು ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಈಶ್ವರಪ್ಪ ನಿವಾಸದಲ್ಲಿ ನೂತನ ಚುನಾವಣಾ ಕಚೇರಿ ಉದ್ಘಾಟನೆ ಮಾಡಿ ಬಳಿಕ ಮಾತನಾಡಿದ ಅವರು, ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ತೀರ್ಮಾನ ಮಾಡಲಾಗಿದೆ. ಹಾಗಾಗಿ ನನ್ನ ನಿವಾಸದಲ್ಲೇ ಕಚೇರಿ ಉದ್ಘಾಟನೆ ಮಾಡಿದ್ದೇವೆ. ನನ್ನ ಮಗನನ್ನು ಎಂಪಿ ಮಾಡುತ್ತೇನೆ ಎಂದು ಸುಳ್ಳು ಹೇಳಿದರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸುಳ್ಳಿನ ಸರದಾರ ಎಂದು ವಾಗ್ದಾಳಿ ಮಾಡಿದ್ದಾರೆ.
ರಾಜ್ಯದಲ್ಲಿ ಕಾರ್ಯಕರ್ತರ ನೋವನ್ನು ಹೋಗಲಾಡಿಸಬೇಕು. ಪಕ್ಷದಿಂದ ತೆಗೆದು ಹಾಕಿದ್ರೆ ಗೆದ್ದ ನಂತರ ಮತ್ತೆ ಬಿಜೆಪಿ ಸೇರ್ತೆನೆ. ತೆಗೆದು ಹಾಕಲಿಲ್ಲ ಅಂದ್ರೆ ಪಕ್ಷದಲ್ಲೇ ಇರುತ್ತೇನೆ. ರಾಘವೇಂದ್ರ ಸೋಲಿನ ನಂತರ ಬಿಎಸ್ ವಿಜಯೇಂದ್ರ ರಾಜ್ಯಾಧ್ಯಕ್ಷ ಕಳೆದುಕೊಳುತ್ತಾನೆ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಪರಿಶುದ್ದ ಮಾಡಬೇಕು ಎಂಬ ಹೆಮ್ಮೆ ಇದೆ. ಕಾರ್ಯಕರ್ತರ ನೋವನ್ನು ಹೋಗಲಾಡಿಸಬೇಕು. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗೆಲ್ಲಬಾರದು. ಸಿದ್ದರಾಮಯ್ಯ ಅವರ ಪರಿಸ್ಥಿತಿ ಏನಾಗಿದೆ. ತನ್ನ ಮಗನನ್ನು ನಿಲ್ಲಿಸುತ್ತೇನೆ ಅಂದರು, ಮಗನನ್ನು ನಿಲ್ಲಿಸಿದಾ? ಕಾಂಗ್ರೆಸ್ನಲ್ಲಿ ಅವರ ಪರಿಸ್ಥಿತಿ ಏನು? ವರುಣದಲ್ಲಿ ಹೊಂದಾಣಿಕೆ ಮಾಡಿಕೊಂಡರು. ರಾಜ್ಯದಲ್ಲಿ 27 ಕ್ಷೇತ್ರ ಎಸ್ಡಿಎ ಗೆಲ್ಲಬೇಕು. ಶಿವಮೊಗ್ಗ ಕ್ಷೇತ್ರದಲ್ಲಿ ನಾನು ಗೆಲ್ಲಬೇಕು ಎಂದು ಹೇಳಿದ್ದಾರೆ.