ಪ್ರತಿನಿಧಿ ವರದಿ ಕೊಳ್ಳೇಗಾಲ
ಪಟ್ಟಣದ ವಿಶ್ವಚೇತನ ವಿದ್ಯಾಸಂಸ್ಥೆ ಆವರಣದಲ್ಲಿ ಅ.13 ರಂದು ಬೆಳಗ್ಗೆ 8 ಮಧ್ಯಾಹ್ನ 1 ಗಂಟೆಯವರೆಗೆ ಕಣ್ಣಿನ ತಪಾಸಣೆ ಹಾಗೂ ಹೃದಯ ತಪಾಸಣಾ ಉಚಿತ ಶಿಬಿರವನ್ನು ಆಯೋಜಿಸಲಾಗಿದೆ.
ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆ, ಮೈಸೂರಿನ ನಾರಾಯಣ ಆಸ್ಪತ್ರೆ, ಕೊಳ್ಳೇಗಾಲದ ಎಚ್.ಕೆ.ಟ್ರಸ್ಟ್, ರೋಟರಿ ಮಿಡ್ ಟೌನ್ ಸಹಯೋಗದೊಂದಿಗೆ ಶಿಬಿರವನ್ನು ಹಮ್ಮಿಕೊಂಡಿದ್ದು, ಈ ಶಿಬಿರದಲ್ಲಿ ಕಣ್ಣಿಗೆ ಸಂಬಂದಿಸಿದ ತೊಂದರೆಗಳು ಹಾಗೂ ಹೃದಯ ಸಂಬಂದಿ ಖಾಯಿಲೆಗಳ ತಪಾಸಣೆ ಮಾಡಲಾಗುವುದು. ಅಲ್ಲದೇ, ರಕ್ತದೊತ್ತಡ, ಇಸಿಜಿ, ಇಕೋ, ಜಿ.ಆರ್.ಬಿ.ಎಸ್, ಐಬ್ರೆಸ್ಟ್, ಪ್ಯಾಪ್ ಸ್ಮಿಯರ್ ಹಾಗೂ ವೈದ್ಯರ ಸಮಾಲೋಚನೆಯೂ ಉಚಿತವಾಗಿರುವುದರಿಂದ ಸಾರ್ವಜನಿಕರು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಎಚ್.ಕೆ.ಟ್ರಸ್ಟ್ ಕಾರ್ಯದರ್ಶಿ ಪ್ರೇಮಲತಾ ಕೃಷ್ಣಸ್ವಾಮಿ ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
9ಕೆಜಿಎಲ್-2 ಫೋಟೋ ಶೀರ್ಷಿಕೆ: ಪ್ರೇಮಲತಾ ಕೃಷ್ಣಸ್ವಾಮಿ ಅವರ ಫೋಟೋ ಇದೆ.