ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಭಿಪ್ರಾಯ
ರೈತ ದಸರಾ ಕಾರ್ಯಕ್ರಮ
ಪ್ರತಿನಿಧಿ ವರದಿ ಚಾಮರಾಜನಗರ
ರೈತರು ದೇಶದ ಬೆನ್ನೆಲುಬಾಗಿದ್ದು, ದೇಶ ಕಾಯುವ ಸೈನಿಕರು ಎಷ್ಟು ಮುಖ್ಯವೋ ದೇಶಕ್ಕೆ ಅನ್ನ ಹಾಕುವ ರೈತರು ಕೂಡ ಅಷ್ಟೇ ಮುಖ್ಯ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಚೆಲುವ ಚಾಮರಾಜನಗರ ದಸರಾ ಮಹೋತ್ಸವದ ಮೂರನೇ ದಿನವಾದ ಬುಧವಾರ ಹಮ್ಮಿಕೊಳ್ಳಲಾಗಿದ್ದ ಆಯೋಜಿಸಿದ್ದ ರೈತ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಇತರೆ ವಸ್ತುಗಳನ್ನು ಕಾರ್ಖಾನೆಗಳಲ್ಲಿ ತಯಾರು ಮಾಡಬಹುದು. ಆದರೆ, ಆಹಾರ ಪದಾರ್ಥಗಳಾದ ಭತ್ತ, ತರಕಾರಿ, ಧಾನ್ಯಗಳನ್ನು ಭೂಮಿಯಲ್ಲಿ ಮಾತ್ರ ಬೆಳೆಯಲು ಸಾಧ್ಯ. ದೇಶಕ್ಕೆ ಅನ್ನ ನೀಡುವ ರೈತರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆ ಸಮಸ್ಯೆಗಳನ್ನು ದೇಶ ಹಾಗೂ ರಾಜ್ಯ ಮಟ್ಟದಲ್ಲಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕಿದೆ. ಜಿಲ್ಲಾ ಮಟ್ಟದಲ್ಲಿಯೂ ರೈತರಿಗೆ ಎದುರಾಗಿರುವ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ, ಈ ಬಾರಿ ಉತ್ತಮ ಮಳೆಯಾಗಿದ್ದು, ರೈತರ ಮೊಗದಲ್ಲಿ ಹರ್ಷ ಮೂಡಿದೆ. ಇದರಿಂದ ಬಿತ್ತನೆ ಕಾರ್ಯ ಚುರುಕುಗೊಂಡಿದೆ. ಸಾಂಪ್ರದಾಯಿಕ ಹಾಗೂ ಸಾವಯವ ಕೃಷಿಗೆ ಆದ್ಯತೆ ನೀಡಿದರೆ. ಇನ್ನು 30 ರಿಂದ 40 ವರ್ಷ ಉತ್ತಮ ಕೃಷಿ ಕಾರ್ಯ ಕೈಗೊಳ್ಳಬಹುದು. ಅಂತರ್ಜಲ ಮಟ್ಟವನ್ನು ಉಳಿಸಿಕೊಳ್ಳಲು ಮುಂದಾಗಬೇಕು. ಇಂದಿನ ಕೃಷಿ ಪದ್ದತಿಯಲ್ಲಿ ಹೆಚ್ಚಿನ ರಾಸಾಯನಿಕ ಬಳಕೆ ಮಾಡುತ್ತಿರುವುದರಿಂದ ಆಹಾರ ಪದಾರ್ಥಗಳು ವಿಷಯುಕ್ತವಾಗುತ್ತಿವೆ. ಇದರಿಂದ ಜನರು ಅನೇಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದರು.
ಕಾರ್ಯಕ್ರಮಕ್ಕೂ ಮೊದಲು ನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಎದುರು ಎತ್ತಿನಗಾಡಿಗಳು, ಕೃಷಿ ಇಲಾಖೆಯ ಸ್ತಬ್ಧಚಿತ್ರಗಳು, ಕಲಾತಂಡಗಳ ಮೆರವಣಿಗೆಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು. ಎತ್ತಿನಗಾಡಿಗಳು, ಕೃಷಿ ಇಲಾಖೆಯ ಸ್ತಬ್ಧಚಿತ್ರಗಳ ಮೆರವಣಿಗೆಯೂ ವಿವಿಧ ಕಲಾತಂಡಗಳೊಂದಿಗೆ ಹೊರಟು ಶ್ರೀ ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತಲುಪಿ, ಬಳಿಕ ಅದೇ ಮಾರ್ಗವಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದ ಅಂಬೇಡ್ಕರ್ ಭವನ ತಲುಪಿತು.
ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಟರ್, ನಗರಸಭಾ ಉಪಾಧ್ಯಕ್ಷೆ ಮಮತಾ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಬಿ.ಟಿ.ಕವಿತಾ, ರೈತ ಮುಖಂಡ ಕುಂದಕೆರೆ ಸಂಪತ್ತು, ನಾಗಪ್ಪ, ಹೊನ್ನೂರು ಬಸವಣ್ಣ, ಅಣಗಳ್ಳಿ ಬಸವರಾಜು, ಶಿವಪುರ ಮಹದೇವಪ್ಪ, ಅಮ್ಮದ್ ಖಾನ್ ಸೇರಿದಂತೆ ಇತರರಿ ಇದ್ದರು.
9ಸಿಎಚ್ಎನ್.1ಎ: ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ರೈತ ದಸರಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಶಿಲ್ಪಾನಾಗ್ ಉದ್ಘಾಟಿಸಿದರು.
9ಸಿಎಚ್ಎನ್.1ಬಿ:ಚಾಮರಾಜನಗರದ ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಎದುರು ಎತ್ತಿನಗಾಡಿಗಳು, ಕೃಷಿ ಇಲಾಖೆಯ ಸ್ತಬ್ಧಚಿತ್ರಗಳು, ಕಲಾತಂಡಗಳ ಮೆರವಣಿಗೆಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು.
(ಫೋಟೊ ಕಳುಹಿಸಿಕೊಡುತ್ತೇನೆ)
————————–
ಕೋಟ್
ಹೆಚ್ಚು ಹೆಚ್ಚು ಕಳೆನಾಶಕ ಬಳಕೆಯಿಂದ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತದೆ. ಹೀಗಾಗಿ ರೈತರು ಸಾಂಪ್ರದಾಯಿಕ ಹಾಗೂ ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಕೃಷಿ ಇಲಾಖೆಯ ಸಿಬ್ಬಂದಿ ರೈತರಿಗೆ ಹಿಂಗಾರು, ಮುಂಗಾರು ಮಳೆಯ ಕುರಿತು ಅಗತ್ಯ ಮಾಹಿತಿ ನೀಡಬೇಕು. ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಬೆಳೆನಾಶವಾದರೆ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು.
ಸಿ.ಪುಟ್ಟರಂಗಶೆಟ್ಟಿ, ಶಾಸಕ