ಶ್ರೀರಂಗಪಟ್ಟಣ : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಜಮೀನುಗಳಲ್ಲಿ ನಾಟಿ ಮಾಡಿರುವ ಭತ್ತದ ಪೈರನ್ನು ಕಿತ್ತು ಕಾವೇರಿ ನದಿಗೆ ಎಸೆದು ರೈತರು ಶನಿವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಮುಖ್ಯ ರಸ್ತೆಯಲ್ಲಿ ರೈತರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಬೀದಿಗಳಲ್ಲಿ ಭತ್ತದ ಪೈರು ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಸ್ನಾನಘಟ್ಟ ಬಳಿಯ ಕಾವೇರಿ ನದಿಗೆ ಹರಿಬಿಡುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದರು.
ಕಾವೇರಿ ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂ ಕೋರ್ಟ್ ಕರ್ನಾಟಕದ ವಿರುದ್ಧವೇ ತೀರ್ಪು ಹೊರ ಬರುತ್ತಿದೆ. ತಮಿಳುನಾಡಿನ ಪರವಾಗಿ ನಿಂತಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕಿದ್ದ ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸಿ ರಾಜ್ಯದ ರೈತರ ಹಿತವನ್ನು ಬಲಿಕೊಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.