ಅಕ್ರಮವಾಗಿ ಸರ್ಕಾರಿ ಭೂಮಿ ಮಣ್ಣು ಮಾರಾಟ
ಪ್ರತಿನಿಧಿ ವರದಿ ಬೇಲೂರು
ಅಕ್ರಮವಾಗಿ ಸರ್ಕಾರಿ ಭೂಮಿ ಮಣ್ಣನ್ನು ತೆಗೆದು ಮಾರಾಟ ಮಾಡುತ್ತಿದ್ದವರನ್ನು ಪ್ರಶ್ನಿಸಿದ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ತಾಲೂಕಿನ ಬಳ್ಳೂರು ಗ್ರಾಮದ ಸರ್ವೇ ನಂ.೧೨ ರಲ್ಲಿ ಸರ್ಕಾರ ನಿವೃತ್ತ ಸೈನಿಕರಿಗೆ ಜಾಗವನ್ನು ಮೀಸಲಿಟ್ಟಿದ್ದು, ಅದರಲ್ಲಿ ಕೆಲವರು ಹಗಲು ರಾತ್ರಿ ಎನ್ನದೆ ಮಣ್ಣನ್ನು ಬಗೆದು ಮಾರಾಟ ಮಾಡಿಕೊಳ್ಳುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.
ಅದರಂತೆ ಮಂಗಳವಾರ ಬಳ್ಳೂರು ಗ್ರಾಮದ ನಾಗರಾಜು ಎಂಬ ವ್ಯಕ್ತಿ ಟಿಪ್ಪರ್ ಗಳಿಗೆ ಮಣ್ಣನ್ನು ತುಂಬಿಕೊಂಡು ಬೇರೆಡೆ ಸಾಗಿಸುತ್ತಿದ್ದರು. ಸಾರ್ವಜನಿಕರಿಗೆ ಹಾಗೂ ಗ್ರಾಮದ ಒಳಭಾಗದಲ್ಲಿ ಮಣ್ಣುತುಂಬಿಕೊಂಡು ಹೋಗುತ್ತಿರುವುದರಿಂದ ರಸ್ತೆಯಲ್ಲಿ ಓಡಾಡಲು ತೊಂದರೆ ಆಗುತ್ತಿದ್ದೆ. ಲಾರಿಗಳು ಹೆಚ್ಚು ಮಣ್ಣನ್ನು ತುಂಬಿಕೊಂಡು ಹೋಗುವುದರಿಂದ ರಸ್ತೆ ಹಾಳಾಗಿ ಗುಂಡ ಬೀಳುತ್ತಿದೆ. ಇದನ್ನು ಗ್ರಾಮದ ಮಹಿಳೆ ರಾಜೇಶ್ವರಿ ಅವರು ನಾಗರಾಜ್ ಅವರನ್ನು ಕೇಳಿ ಮಳೆಯಿಂದ ರಸ್ತೆಗೆ ಗುಂಡಿ ಬಿದ್ದ ಪರಿಣಾಮ ಸಂಚರಿಸಲು ತೊಂದರೆಯಾಗತ್ತಿದೆ ಎಂದು ಮನವರಿಕೆ ಮಾಡಿಕೊಟ್ಟರು. ಇದರಿಂದ ಕೋಪಗೊಂಡ ನಾಗರಾಜ್ ಮನೆಯ ಮುಂಭಾಗ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಮಾರಣಾಂತಿಕ ಹಲ್ಲೆಮಾಡಿ ಕೈ, ತಲೆ, ಎದೆ ಭಾಗಕ್ಕೆ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಅವರನ್ನು ಬೇಲೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಹಾಸನಕ್ಕೆ ದಾಖಲಿಸಲಾಗಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.