ಒಂದೇ ಕುಟುಂಬದ ಮೂವರು ನೀರು ಪಾಲಾದ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಚಂಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನ ಮಹಮ್ಮದ್ ಕಪೀಲ್ (42), ಶಾವರ ಭಾನು (35), ಶಾಹೀರಾ ಭಾನು(20) ಎಂದು ಗುರುತಿಸಲಾಗಿದೆ.
ಆಕಸ್ಮಿಕವಾಗಿ ಕಾಲು ಜಾರಿ ನಾಲೆಗೆ ಬಿದ್ದ ಪುತ್ರಿಯನ್ನ ರಕ್ಷಿಸಲು ಹೋಗಿ ಅಪ್ಪ, ಅಮ್ಮ, ಪುತ್ರಿ ಮೂವರು ಮೃತಪಟ್ಟಿದ್ದಾರೆ. ಅಜ್ಜಿಯ ತಿಥಿ ಕಾರ್ಯಕ್ಕಾಗಿ ಕಪೀಲ್ ಕುಟುಂಬ ಸರಗೂರು ಗ್ರಾಮಕ್ಕೆ ಬಂದಿದ್ದರು. ತಿಥಿ ಕಾರ್ಯ ಮುಗಿಸಿ ನುಗು ಜಲಾಶಯದ ಬಲದಂಡೆ ನಾಲೆಯಲ್ಲಿ ಕೈ ಕಾಲು ತೊಳೆಯಲು ಹೋದಾಗ ಈ ದುರ್ಘಟನೆ ಸಂಭವಿಸಿದೆ.