ಮಂಡ್ಯ: ರೈತರೊಬ್ಬರ ಕೆಲಸ ಮಾಡಿಕೊಡಲು 10 ಸಾವಿರ ರೂ. ನೀಡುವಂತೆ ಬೇಡಿಕೆ ಇಟ್ಟು, ಹಣ ಪಡೆದುಕೊಳ್ಳುವಾಗ ಮಂಡ್ಯ ತಾಲೂಕು ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ತಿಪ್ಪೇಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದ ಪ್ರಥಮ ದರ್ಜೆ ಸಹಾಯಕ. ಜಮೀನು ಖಾತೆ ಮಾಡಿಕೊಡಲು ಮರಕಾಡದೊಡ್ಡಿಯ ರೈತ ಮೊಹನ್ ಎಂಬುವವರ ಬಳಿ ಹಣದ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ರೈತ ಮೋಹನ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಸಿಪಿಐ ಬ್ಯಾಟರಾಯಗೌಡ ನೇತೃತ್ವದ ತಂಡ ಬುಧವಾರ ದಾಳಿ ನಡೆಸಿ, ತಿಪ್ಪೇಸ್ವಾಮಿಯನ್ನು ಬಂಧಿಸಿ, ಮುಂದಿನ ಕ್ರಮ ಕೈಗೊಂಡಿದೆ.