ಹುಣಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾ ಕಾವು ಹೆಚ್ಚಾಗಿದ್ದು ಈ ನಡುವೆ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್ ಗೆ ಮಾಜಿ ಸಿಎಂ ದೇವರಾಜ ಅರಸು ಅವರ ಮೊಮ್ಮಗ ಮಂಜುನಾಥ್ ಅರಸು ಬೆಂಬಲ ವ್ಯಕ್ತಪಡಿಸಿದ್ದಾರೆ.
ಮಾಜಿ ಸಂಸದೆ ಚಂದ್ರಪ್ರಭಾ ಅರಸು ಅವರ ಪುತ್ರ ಮಂಜುನಾಥ್ ಅರಸು ಅವರು ಹಣುಸೂರಿನ ಅರಸು ಕಲ್ಲಹಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಅವರಿಗೆ ಬೆಂಬಲ ಘೋಷಣೆ ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹುಣಸೂರು ವಿಧಾನಸಭಾ ಕ್ಷೇತ್ರದಲ್ಲಿ ಮತಯಾಚನೆ ಮಾಡಿದರು. ಹುಣಸೂರು ಪಟ್ಟಣದ ಮಾಜಿ ಸಿಎಂ ಡಿ.ದೇವರಾಜ ಅರಸ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಬಳಿಕ ಡಿ.ದೇವರಾಜ ಅರಸು ಸಮಾಧಿಗೆ ಯದುವೀರ್ ಒಡೆಯರ್ ಪೂಜೆ ಸಲ್ಲಿಕೆ ಮಾಡಿದರು. ಈ ಮೂಲಕ ಸಾಮಾಜಿಕ ನ್ಯಾಯದ ಹರಿಕಾರನಿಗೆ ಮೈತ್ರಿ ನಾಯಕರು ಗೌರವ ಸಲ್ಲಿಸಿದರು.ಹುಣಸೂರು ಕ್ಷೇತ್ರದಲ್ಲಿ ಪ್ರಚಾರ ನಡೆಸಿದ ಯದುವೀರ್ ಒಡೆಯರ್ ಅವರಿಗೆ ಸ್ಥಳೀಯ ಶಾಸಕ ಜಿ.ಡಿ. ಹರೀಶ್ ಗೌಡ, ದೇವರಾಜ ಅರಸು ಅವರ ಮೊಮ್ಮಗ ಮಂಜುನಾಥ್ ಅರಸ್ ಸಾಥ್ ನೀಡಿದರು.