ಪ್ರತಿನಿಧಿ ವರದಿ ಪಿರಿಯಾಪಟ್ಟಣ
ಬಿಜೆಪಿ ಸಾಧನೆಗಳು ಹಾಗೂ ಅಭಿವೃದ್ಧಿಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ದೇಶದ ಭವಿಷ್ಯದ ದೃಷ್ಟಿಯಿಂದ ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಸರ್ಕಾರವನ್ನು ಆಯ್ಕೆ ಮಾಡಬೇಕೆಂದು ಮಾಜಿ ಶಾಸಕ ಕೆ. ಮಹದೇವ್ ತಿಳಿಸಿದರು.
ವಿ.ಜಿ ಕೊಪ್ಪಲು ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ, ಕರ ಪತ್ರ ಹಂಚಿ ಪ್ರಚಾರದಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಭಯೋತ್ಪಾದಕರಿಗೆ, ಕಾನೂನು ಸುವ್ಯವಸ್ಥೆ ಹಾಳು ಮಾಡುವವರಿಗೆ ಕಾಂಗ್ರೆಸ್ ಆಡಳಿತ ದಾರಿ ಮಾಡಿಕೊಟ್ಟಿದೆ. ರಾಜ್ಯದ ಜನತೆ ಕಾಂಗ್ರೆಸ್ ಸರ್ಕಾರದ ದುರಾಡಳಿತವನ್ನು ಗಮನಿಸುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠವನ್ನು ಮತದಾರರು ಕಲಿಸುತ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದು ದುರ್ದೈವವೇ ಸರಿ ಎಂದು ಟೀಕಿಸಿದರು.
ದೇಶದ ಎಲ್ಲೆಡೆ ಮೋದಿ ಅಲೆ ಇದೆ. ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಿದೆ. ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ನೀಡಿ, ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಬೇಕು. ಆದ್ದರಿಂದ ಮೈಸೂರು– ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರಿಗೆ ಗೆಲುವು ಕೊಡಬೇಕೆಂದು ಮನವಿ ಮಾಡಿದರು.
ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಅಣ್ಣಯ್ಯಶೆಟ್ಟಿ, ಕಾಳಪ್ಪ, ಮಂಜುನಾಥ್, ಮಧುಸೂಧನ್, ವಿಜಿಕುಮಾರ್, ಪರಮೇಶ್, ರೇವಣ್ಣ
ಮಂಜೇಗೌಡ, ವಕೀಲ ನಾಗರಾಜು,ನಾರಾಯಣ, ಚಂದ್ರೇಗೌಡ, ಮಹೇಂದ್ರ ಉಪಸ್ಥಿತರಿದ್ದರು.
ಬೆಟ್ಟದಪುರ ಸಮೀಪದ ವಿ.ಜಿ ಕೊಪ್ಪಲು ಗ್ರಾಮದಲ್ಲಿ ಮಾಜಿ ಶಾಸಕ ಕೆ.ಮಹದೇವ್ ಮನೆ ಮನೆಗೆ ಭೇಟಿ ನೀಡಿ ಕರಪತ್ರ ಹಂಚುವ ಮೂಲಕ ಮತಯಾಚನೆ ಮಾಡಿದರು.