ಕಡ್ಡಾಯ
ಮೈಸೂರು: ಲಯನ್ಸ್ ಕ್ಲಬ್ ಆಫ್ ಬಾಂಧವ್ಯ, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಜು.28ರ ಭಾನುವಾರ ಉಚಿತ ಕಣ್ಣಿನ ತಪಾಸಣೆ ಮತ್ತು ಕಣ್ಣಿನ ಶಸ್ತ್ರ ಚಿಕಿತ್ಸಾ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಜ್ಯೋತಿ ಸಮಾಜ ಕಲ್ಯಾಣ ಕೇಂದ್ರ, ಇಲವಾಲ ಆಪ್ಟಿಕಲ್ಸ್ & ಐ ಕೇರ್ ಹಾಗೂ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಶಿಬಿರ ಆಯೋಜಿಸಲಾಗಿದೆ. ನಗರದ ಬನ್ನೂರು ರಸ್ತೆಯಲ್ಲಿರುವ ವಿದ್ಯಾ ಜ್ಯೋತಿ ಶಾಲಾ ಆವರಣದಲ್ಲಿ ಬೆಳಗ್ಗೆ 9 ರಿಂದ 1 ಗಂಟೆಯವರಗೆ ಶಿಬಿರ ನಡೆಯಲಿದ್ದು, ಶಿಬಿರದಲ್ಲಿ ಕಣ್ಣಿನ ತೊಂದರೆ ಇರುವ ಮಕ್ಕಳು ಮತ್ತು ವಯಸ್ಸಾದವರ ಕಣ್ಣಿಗೆ ಸಂಬಂಧಿಸಿದ ತೊಂದರೆಗಳಿಗೆ ಸಲಹೆ ನೀಡಲಾಗುವುದು. ಅಲ್ಲದೇ ತಪಾಸಣೆ ವೇಳೆ ಶಸ್ತ್ರಚಿಕಿತ್ಸೆಗೆ ಅರ್ಹರಾದವರಿಗೆ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಿ, ನೇತ್ರ ತಜ್ಞರ ಸಲಹೆಯಂತೆ ಉಚಿತ ಲೆನ್ಸ್ ಅಳವಡಿಸಲಾಗುವುದು. ಜನರು ಈ ಶಿಬಿರದ ಉಪಯೋಗ ಮಾಡಿಕೊಳ್ಳಲು ಕೋರಲಾಗಿದೆ. ಮಾಹಿತಿಗಾಗಿ ಲಯನ್ ಲೋಕೇಶ್ 9964669079, ಸಿಸ್ಟರ್ ಶಾಂತಿ 7899936519 ಅವರನ್ನು ಸಂಪರ್ಕಿಸಬಹುದು.
=================