- ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ
ಮಡಿಕೇರಿ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನದ ನಿರ್ವಹಣಾ ಸಮಿತಿ ಸಭೆಯ ವೀರಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನದ ಪೂರ್ವ ಭಾಗದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.
ತಡೆಗೋಡೆ ಎತ್ತರಿಸುವುದು ಹಾಗೂ ಸ್ಮಾರಕ ಭವನದ ಉತ್ತರ ಭಾಗದಲ್ಲಿ ತಡೆಗೋಡೆ ಮುಂದುವರಿದ ಕಾಮಗಾರಿ ಕೈಗೊಳ್ಳುವ ಸಂಬಂಧ ಅಂದಾಜು ಪಟ್ಟಿ ಸಲ್ಲಿಸುವಂತೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಿಗೆ ಸೂಚಿಸಿದರು.
ಭವನದ ಪಶ್ಚಿಮ ಭಾಗದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಕಟ್ಟಡ ಕಾಮಗಾರಿಯಿಂದ ತಡೆಗೋಡೆಯ ಎತ್ತರ ಕಡಿಮೆಯಾಗಿದ್ದು, ಈ ಸಂಬಂಧ ಅಂದಾಜು ಪಟ್ಟಿ ಸಲ್ಲಿಸುವಂತೆ, ಸ್ಮಾರಕ ಭವನದ ಉತ್ತರ ಭಾಗದಲ್ಲಿ ತಡೆಗೋಡೆ ಉಳಿದ ಕಾಮಗಾರಿ ಕೈಗೊಳ್ಳಲು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರಕ್ಕೆ ಪತ್ರ ಬರೆಯುವ ಸಂಬಂಧ ಅಂದಾಜು ಪಟ್ಟಿ ಸಲ್ಲಿಸುವಂತೆ ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಮಾತನಾಡಿ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ 25 ಲಕ್ಷ ರೂ. ಬಿಡುಗಡೆಯಾಗಿ ಕಾಮಗಾರಿ ಕೈಗೊಳ್ಳಲಾಗಿದ್ದು, ಮುಂದುವರಿದ ಕಾಮಗಾರಿ ಕೈಗೊಳ್ಳಬೇಕಿದೆ.ಹಿಂಭಾಗದಲ್ಲಿ ಗೇಟ್ ಅಳವಡಿಸಬೇಕಿದೆ ಎಂದು ಗಮನಕ್ಕೆ ತಂದರು.
ಭವನದ ವೀಕ್ಷಕರ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಟೆಂಡರ್ ಆಹ್ವಾನಿಸುವುದು, ಮ್ಯೂಸಿಯಂ ಒಳಭಾಗದಲ್ಲಿ ಗಾಜಿನ ಫಲಕ ಅಳವಡಿಸುವುದು, ಸ್ಮಾರಕ ಭವನದ ಕಾರಂಜಿ ದುರಸ್ತಿ ಪಡಿಸಲು ಅನುಮೋದನೆ ನೀಡಲಾಯಿತು.
ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವೆಂಕಟೇಶ್ ನಾಯಕ್, ಸಹಾಯಕ ಎಂಜಿನಿಯರ್ ಸತೀಶ್, ತಹಶೀಲ್ದಾರ್ ರಮೇಶ್ ಬಾಬು, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮುತ್ತಪ್ಪ, ಪೌರಾಯುಕ್ತ ವಿಜಯ್, ನಿರ್ಮಿತಿ ಕೇಂದ್ರದ ಎಂಜಿನಿಯರ್ ರಾಘವೇಂದ್ರ, ಮಣಜೂರು ಮಂಜುನಾಥ್ ಇದ್ದರು.
ಭವನದ ವೀಕ್ಷಕರ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಟೆಂಡರ್ ಆಹ್ವಾನಿಸುವುದು, ಮ್ಯೂಸಿಯಂ ಒಳಭಾಗದಲ್ಲಿ ಗಾಜಿನ ಫಲಕ ಅಳವಡಿಸುವುದು, ಸ್ಮಾರಕ ಭವನದ ಕಾರಂಜಿ ದುರಸ್ತಿ ಪಡಿಸಲು ಅನುಮೋದನೆ ನೀಡಲಾಯಿತು.
ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವೆಂಕಟೇಶ್ ನಾಯಕ್, ಸಹಾಯಕ ಎಂಜಿನಿಯರ್ ಸತೀಶ್, ತಹಶೀಲ್ದಾರ್ ರಮೇಶ್ ಬಾಬು, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮುತ್ತಪ್ಪ, ಪೌರಾಯುಕ್ತ ವಿಜಯ್, ನಿರ್ಮಿತಿ ಕೇಂದ್ರದ ಎಂಜಿನಿಯರ್ ರಾಘವೇಂದ್ರ, ಮಣಜೂರು ಮಂಜುನಾಥ್ ಇದ್ದರು.
ಫೋಟೋ 12 ಎಂಡಿಕೆ 02 ; ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.