ದೆಹಲಿ: ರಾಜ್ಯದಲ್ಲಿ ವಿದ್ಯುತ್ ಸಮಸ್ಯೆಯಿಂದ ಲೋಡ್ ಶೆಡ್ಡಿಂಗ್ ವಿಚಾರ ‘ ದೆಹಲಿಯಲ್ಲಿ ಕೇಂದ್ರ ಇಂಧನ ಸಚಿವ ಆರ್.ಕೆ.ಸಿಂಗ್ ಅವರನ್ನು ಕೆಜೆ ಜಾರ್ಜ್ ಭೇಟಿಯಾಗಿದ್ದಾರೆ. ನಿನ್ನೆ(ಅ.11) ದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಈ ವೇಳೇ ಕರ್ನಾಟಕದ ಇಂಧನ ಪರಿಸ್ಥಿತಿ ಕುರಿತು ಮನವರಿಕೆ ಮಾಡಿಕೊಟ್ಟಿದ್ದು, ಕೇಂದ್ರೀಯ ವಿದ್ಯುತ್ ಉತ್ಪಾದನಾ ಕೇಂದ್ರಗಳಲ್ಲಿ ಹೆಚ್ಚಿನ ಪಾಲು ನೀಡಿ.ಕರ್ನಾಟಕಕ್ಕೆ ಹೆಚ್ಚುವರಿ ಅಗತ್ಯ ವಿದ್ಯುತ್ ಪೂರೈಸುವಂತೆ ಜಾರ್ಜ್ ಮನವಿ ಮಾಡಿದ್ದಾರೆ.