ಪ್ರತಿನಿಧಿ ವರದಿ ಬೇಲೂರು
ತಾಲೂಕಿನ ಅರೇಹಳ್ಳಿ ಹೋಬಳಿಯ ಬೆಳ್ಳಾವರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕರ್ನಾಟಕ ಕಾಫಿ ಬೆಳೆಗಾರರ ಸಂಘ ಹಾಗೂ ಬೆಳೆಗಾರರ ಟ್ರಸ್ಟ್ ಅರೇಹಳ್ಳಿ ವತಿಯಿಂದ ಸ್ಮಾರ್ಟ್ ಟಿವಿಯನ್ನು ಕೊಡುಗೆ ನೀಡಲಾಯಿತು.
ಈ ವೇಳೆ ಮುಖ್ಯಶಿಕ್ಷಕ ವೈ.ಜೆ.ರಾಮೇಗೌಡ ಮಾತನಾಡಿ, ಮಕ್ಕಳ ಭವಿಷ್ಯ ನಿರ್ಮಾಣಗೊಳ್ಳುವುದು ಶಾಲೆಯೆಂಬ ನಾಲ್ಕು ಗೋಡೆಗಳ ಮಧ್ಯೆ. ಅದರಂತೆ ಆಧುನಿಕ ತಂತ್ರಜ್ಞಾನದ ಈ ಕಾಲಘಟ್ಟದಲ್ಲಿ ಗ್ರಾಮೀಣ ಪ್ರದೇಶದ ನಮ್ಮ ವಿದ್ಯಾರ್ಥಿಗಳ ಜ್ಞಾನ ವೃದ್ಧಿಗಾಗಿ ಮಹತ್ತರ ಪಾತ್ರ ವಹಿಸುತ್ತದೆ. ಶೈಕ್ಷಣಿಕ ಪ್ರಗತಿಗೆ ಪೂರಕವಾದ ಸ್ಮಾರ್ಟ್ ಟಿವಿಯು ಅತ್ಯವಶ್ಯಕವಾಗಿರುದನ್ನು ಮನಗಂಡು ನಮ್ಮ ಮನವಿಯಂತೆ ಟ್ರಸ್ಟ್ ವತಿಯಿಂದ ಕೊಡುಗೆ ನೀಡಿರುವುದು ಹರ್ಷದಾಯಕವಾಗಿದೆ ಎಂದರು.
ಕರ್ನಾಟಕ ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಪಿ.ಬಸವರಾಜ್, ಉಪಾಧ್ಯಕ್ಷ ಶಾರಿಬ್ ಫರ್ಹಾನ್, ಕಾರ್ಯದರ್ಶಿ ಬಿ.ಸಿ.ಮೋಹನ್, ಎಸ್ಡಿಎಂಸಿ ಅಧ್ಯಕ್ಷ ನಾಗೇಶ್ ಸೇರಿದಂತೆ ಇತರರಿದ್ದರು.