ಶಾಸಕ ಎ.ಎಸ್.ಪೊನ್ನಣ್ಣ ಕಿವಿ ಮಾತು
ಪ್ರತಿನಿಧಿ ವರದಿ ಗೋಣಿಕೊಪ್ಪ
ಮುಂದಿನ ಪೀಳಿಗೆಗೆ ಉತ್ತಮ ಆರೋಗ್ಯ ಒದಗಿಸುವುದು ಸೂಕ್ತ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು.
ತಿತಿಮತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರುಣಾ ಟ್ರಸ್ಟ್ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಿದ ಆ್ಯಂಟಿ ಮೈಕ್ರೋಬಿಯಲ್ ಸ್ಟೀವರ್ಡ್ಶಿಪ್ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಮನುಷ್ಯ ಪರಿಸರಕ್ಕೆ ಹೊಂದಿಕೊಂಡು ಜೀವನ ನಡೆಸಬೇಕು ಎಂದು ಕಿವಿ ಮಾತು ಹೇಳಿದರು.
ಫ್ಲೋರಿಡಾ ಯುನಿವರ್ಸಿಟಿ ಮೆಡಿಸನ್ ವಿಭಾಗದ ಮುಖ್ಯಸ್ಥ ಡಾ.ಕಲ್ಯಾಟಂಡ ಜೀವನ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಶಾಸಕರ ಪ್ರೋತ್ಸಾಹ ಕೂಡ ಮುಖ್ಯವಾಗಿದೆ ಎಂದರು.
ಸಮಾಜ ಸೇವಕರು ಕಾರ್ಯಕ್ರಮದ ಆಯೋಜಕ ಗಣೇಶ್, ಡಾ.ನೈರಿನ್ ಶೇಖ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ವಲಯ ಅಧ್ಯಕ್ಷ ನವೀನ್ ಕುಮಾರ್, ಜಿಪಂ ಮಾಜಿ ಸದಸ್ಯೆ ಪಂಕಜ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನಿರ ಮೈನಾ, ಕರುಣಾ ಟ್ರಸ್ಟ್ ಮುಖ್ಯಸ್ಥ ವೆಂಕಟ್ ನಾರಾಯಣ್, ಕೀಕಿರ ವಸಂತ್ ಇದ್ದರು.
ಫೋಟೋ : 4 ಎಂಡಿಕೆ 05: ತಿತಿಮತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಶಾಶಕ ಎ. ಎಸ್. ಪೊನ್ನಣ್ಣ ಮಾತನಾಡಿದರು.
————————-
ಕೋಟ್
ನಾವುಗಳು ನಮಗರಿಯದೆ ಔಷಧ ಬೆರೆಸಿದ ಆಹಾರಗಳನ್ನು ಸೇವಿಸುತ್ತಿದ್ದು, ಇದು ವಿಶೇಷವಾಗಿ ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತವಾಗಿ ಪರಿಣಾಮ ಬೀರುತ್ತಿದೆ. ದುಷ್ಪರಿಣಾಮಗಳನ್ನು ತಡೆಗಟ್ಟಲು ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸುತ್ತಿರುವುದು ಮತ್ತು ಆಶಾ ಕಾರ್ಯಕರ್ತೆಯರಿಗೆ ತರಬೇತಿ ನೀಡುತ್ತಿರುವುದು ಶ್ಲಾಘನೀಯ.
ಎ.ಎಸ್.ಪೊನ್ನಣ್ಣ, ಶಾಸಕ.