ಪ್ರತಿನಿಧಿ ವರದಿ ಕೆ.ಆರ್.ಪೇಟೆ
ಗೊರೂರು ಜಲಾಶಯವು ಭರ್ತಿಯಗುತ್ತಿರುವ ಹಿನ್ನೆಲೆಯಲ್ಲಿ ಹೇಮಾವತಿ ನದಿಗೆ 25ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಯಬಿಡಲಾಗುತ್ತಿದ್ದೆ.
ಹೇಮಾವತಿ ನದಿಯು ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ನದಿಯ ತಗ್ಗು ಪಾತ್ರದ ಜನರು ಎಚ್ಚರ ವಾಗಿರಬೇಕು ಎಂದು ಹೇಮಾವತಿ ಜಾಲಾಶಯ ಯೋಜನೆಯ ನಂ.3 ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಆನಂದ್ ಮನವಿ ಮಾಡಿದರು.
ಗದ್ದೆ ಹೊಸೂರು, ಚಿಕ್ಕ ಮಂದಗೆರೆ, ಶ್ರವಣೂರು, ಬಂಡಿಹೊಳೆ ಸೇರಿದಂತೆ ವಿವಿಧ ಗ್ರಾಮಗಳಿಗೆ ನೀರು ನುಗ್ಗಿದ್ದು, ನದಿಯು ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರವಾಗಿರುವ ಜತೆಗೆ ನದಿಗೆ ಬಟ್ಟೆ ಒಗೆಯಲು, ದನಕರುಗಳಿಗೆ ನೀರು ಕುಡಿಸಲು ನದಿಗೆ ಇಳಿಯಬಾರದು ಎಂದು ಎಚ್ಚರಿಸಿದ ಎಕ್ಸಿಕ್ಯೂಟಿವ್ ಎಂಜಿನಿಯರ್ ಆನಂದ್ ಗೊರೂರು ಜಲಾಶಯಕ್ಕೆ ಒಳ ಹರಿವು ಹೆಚ್ಚಾಗುತ್ತಿದ್ದು ನದಿಗೆ ಹರಿಯ ಬಿಡುವ ನೀರಿನ ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆ ಇರುವುತ್ತದೆ. ರೈತ ಬಾಂಧವರು ಎಚ್ಚರವಾಗಿರಬೇಕು. ನದಿಯ ಪಾತ್ರದ ತಗ್ಗುಗಳಲ್ಲಿ ವಾಸವಾಗಿರುವ ಜನರು ಸುರಕ್ಷಿತ ಪ್ರದೇಶಕ್ಕೆ ತೆರಳಬೇಕು. ನದಿಗೆ ಇಳಿಯುವುದು, ದನಕರುಗಳನ್ನು ತೊಳೆಯಲು ನದಿಗೆ ಹೋಗುವುದು ಸೇರಿದಂತೆ ನದಿಯ ಪಾತ್ರದತ್ತ ತೆರಳ ಬಾರದು ಎಂದು ತಿಳಿಸಿ, ಎಚ್ಚರಿಕೆ ಸೂಚನಾ ಫಲಕಗಳನ್ನು ಹಾಕಿಸಿದ್ದಾರೆ.
ಸರ್ಕಲ್ ಇನ್ಸ್ಪೆಕ್ಟರ್ ರೇವತಿ, ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಸತೀಶ್, ಪಿಡಿಓ ದಯಾಶಂಕರ್, ಎಇಇ ವಿಶ್ವನಾಥ್, ಸಹಾಯಕ ಎಂಜಿನಿಯರ್ ನಾಯಕ್, ರಾಘವೇಂದ್ರ ಉಪಸ್ಥಿತರಿದ್ದರು.