ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ ಐದು ಗ್ಯಾರಂಟಿಗಳಲ್ಲಿ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಕೂಡ ಒಂದು. ಮೊದಮೊದಲು ಈ ಯೋಜನೆ ಜಾರಿಯಾದಾಗ ಹೆಚ್ಚಿನ ಸಂಖ್ಯೆಯಲ್ಲಿ ಮಳೆಯರೇ ಓಡಾಡುತ್ತಿದ್ದರು. ಕೆಲವೊಮ್ಮೆ ಸೀಟು ಸಿಗದಿದ್ದಾಗ ಮಹಿಳೆಯ ಮಧ್ಯೆ ದೊಡ್ಡ ದೊಡ್ಡ ಜಗಳಗಳೇ ಆಗಿವೆ. ಈ ಉಚಿತ ಬಸ್ ಯೋಜನೆ ಬಗ್ಗೆ ಬಿಜೆಪಿ ಸಕಾಷ್ಟು ಟೀಕೆ ಮಾಡಿತ್ತು. ಸದ್ಯ ಈಗ ಇದೇ ಶಕ್ತಿ ಯೋಜನೆಯಿಂದ ಜಿಎಸ್ಟಿ ಸಂಗ್ರಹ ಮತ್ತು ಮಹಿಳೆಯರ ಪಾಲುದಾರಿಕೆ ಶೇ 25.1ನಿಂದ 30.2ಗೆ ಹೆಚ್ಚಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಕ್ತಿ ಉಚಿತ ಯೋಜನೆ ಎಂದು ಮೂಗು ಮುರಿಯುವವರ ಗಮನಕ್ಕೆ! ಶಕ್ತಿ ಯೋಜನೆಯಿಂದ ಜಿಎಸ್ಟಿ ಸಂಗ್ರಹ ಹೆಚ್ಚಿದ್ದು, ಔದ್ಯೋಗಿಕ ಕ್ಷೇತ್ರದಲ್ಲಿ ಶೇ 25.1ನಿಂದ 30.2ರಷ್ಟು ಮಹಿಳೆಯ ಪಾಲುದಾರಿಕೆ ಹೊಂದಿದೆ. ಇದು ಬಿಟ್ಟಿ ಭಾಗ್ಯವಲ್ಲ ಸಮಾಜದಲ್ಲಿ ಸರ್ಕಾರ ಹೂಡಿರುವ ಬಂಡವಾಳ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಆ ಮೂಲಕ ಶಕ್ತಿ ಉಚಿತ ಯೋಜನೆ ಎಂದು ಮೂಗು ಮುರಿಯುವ ಬಿಜೆಪಿಗೆ ಟಾಂಗ್ ನೀಡಿದ್ದಾರೆ.