ದೇವನಹಳ್ಳಿ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷರಾಗಿ ಸಿ. ಜಗನ್ನಾಥ್ ಮತ್ತು ಸದಸ್ಯರಾಗಿ ನೇಮಕಗೊಂಡಿರುವ ಬಿದಲೂರು ಮುನಿರಾಜು (ರಾಜಣ್ಣ)ಅವರಿಗೆ ಅಭಿನಂದಿಸುವುದರ ಮೂಲಕ ಮಾಜಿ ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಹನುಮಂತಪ್ಪ ಪಂಚ ಗ್ಯಾರಂಟಿಗಳನ್ನು ಪ್ರತಿಯೊಬ್ಬ ಫಲಾನುಭವಿಗಳಿಗೂ ತಲುಪಿಸುವಂತಾಗಲಿ ಶುಭಹಾರೈಸಿದರು.
ಪಕ್ಷದ ಪ್ರತಿಯೊಬ್ಬ ಮುಖಂಡರು ಮತ್ತು ಕಾರ್ಯಕರ್ತರು ಸಂಘಟನೆಯೊಂದಿಗೆ ಪ್ರಮಾಣಿಕವಾಗಿ ಜವಬ್ದಾರಿಯನ್ನು ನಿಭಾಯಿಸಲಿದ್ದೇನೆ, ನಿಷ್ಠೆಯಿಂದ ಕಾಂಗ್ರೆಸ್ ಪಕ್ಷದಲ್ಲಿ ಶ್ರಮಿಸಿದ್ದ ಫಲವಾಗಿ ಪಂಚ ಗ್ಯಾರಂಟಿಗಳ ಅನುಷ್ಠಾನದ ಸಮಿತಿಯ ತಾಲೂಕು ಅಧ್ಯಕ್ಷರು ಮತ್ತು ಸದಸ್ಯತ್ವ ಸ್ಥಾನಮಾನ ಸಿಕ್ಕಿರುವುದು ಸಂತಸ ತಂದಿದೆ ಎಂದರು.
ಪಕ್ಷ ಮತ್ತಷ್ಟು ಹೆಚ್ಚು ಜವಾಬ್ದಾರಿ ನೀಡಿದ್ದು, ಅದನ್ನು ಪ್ರಾಮಾಣಿಕವಾಗಿ ಜನರ ಸೇವೆಯನ್ನು ನಿರಂತರವಾಗಿ ಮಾಡಲು ಅವಕಾಶ ಸಿಕ್ಕಿದೆ ತಾಲೂಕಿನ ಎಲ್ಲ ಗ್ರಾಮಾಗಳಲ್ಲಿ ಸಂಚರಿಸಿ ಗ್ಯಾರಂಟಿ ಅನುಷ್ಠಾನದ ಕುರಿತು ಹೊಂದಿರುವ ಸಮಸ್ಯೆಗಳನ್ನು ಕೂಲಂಕುಶವಾಗಿ ಗುರುತಿಸಿ ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ ನಿಜವಾದ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳು ತಲುಪಿಸುವ ಕಾರ್ಯ ಮಾಡಲಿದ್ದಾರೆ ಎಂದು ಆಶಯ ವ್ಯಕ್ತಪಡಿಸಿದರು.
ಮಾಜಿ ಪುರಸಭಾ ಅಧ್ಯಕ್ಷ ನರಸಿಂಹಮೂರ್ತಿ ,ಕಸ್ತೂರಿ ಮಂಜುನಾಥ್, ವೇಣುಗೋಪಾಲ ಸ್ವಾಮಿ ದೇವಾಲಯದ ಒಳ ಕ್ರೀಡಾಂಗಣ ಮಾಜಿ ಅಧ್ಯಕ್ಷ ವೇಣುಗೋಪಾಲ್ , ಸೀನಾ , ದೊಡ್ಡ ಕುರುಬರಹಳ್ಳಿ ದೇವರಾಜ್ ಇದ್ದರು.
2ಡಿಎಚ್ಎಲ್ ಪಿ -೨
ರಾಜ್ಯ ಸರ್ಕಾರದ ಪಂಚ ಗ್ಯಾರೆಂಟಿ ಯೋಜನೆಗಳ ತಾಲೂಕು ಅಧ್ಯಕ್ಷರಾಗಿ ಸಿ .ಜಗನ್ನಾಥ್ ಮತ್ತು ಸದಸ್ಯರಾಗಿ ನೇಮಕಗೊಂಡಿರುವ ಬಿದಲೂರು ಮುನಿರಾಜು (ರಾಜಣ್ಣ)ರವರಿಗೆ ಅಭಿನಂದಿಸಿದರು.