ಬೆಂಗಳೂರು : ನಮಗೆ ಬರಬೇಕಾದ ತೆರಿಗೆ ಹಣ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ. ಈ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಮಾತನಾಡಿ, ಸಿದ್ದರಾಮಯ್ಯ ಏಕೆ ಪ್ರಧಾನಿ ಮೋದಿ ಬಗ್ಗೆ ಮಾತಾಡುತ್ತಾರೆ? ನೀವು ಹಣಕಾಸು ಮಂತ್ರಿ ಆಗಿದ್ದಾಗ ಏನ್ಮಾಡಿದ್ರಿ ಹೇಳಿ? ಬೆಳಿಗ್ಗೆಯಿಂದ ನೀವು ಬರೀ ಮೋದಿ ಮೋದಿ ಅಂತೀರಾ. ಪ್ರಧಾನಿ ಮೋದಿಯವರನ್ನ ಇಡಿ ವಿಶ್ವವೇ ಒಪ್ಪಿದೆ. ನೀವು ಮಾತ್ರ ಬರೀ ಮೋದಿ ಕುರಿತು ಮಾತನಾಡುತ್ತೀರಿ. ಸಿದ್ದರಾಮಯ್ಯ ಯಾಕೆ ಪ್ರಧಾನಿ ಮೋದಿ ಬಗ್ಗೆ ಮತನಾಡುತ್ತಿರಾ? ಫೈನಾನ್ಸ್ ಕಮೀಟಿ ಸೂಚಿಸಿದ ಹಣ ಬಿಟ್ಟು ಮನಮೋಹನ್ ಸಿಂಗ್ ಅವರು ರಾಜ್ಯಕ್ಕೆ ಬೇರೆ ಏನು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ನೀರಿ ಸಮಸ್ಯೆ ಸಾಕಷ್ಟು ಇದೆ. ಒಂದು ಟ್ಯಾಂಕರ್ಗೆ ಎರಡುವರೆ ಸಾವಿರ ಕೇಳುತ್ತಿದ್ದಾರೆ. ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ ಶುರುವಾಗಿದೆ. ನಿನ್ನೆ ಉಪ ಮುಖ್ಯಮಂತ್ರಿಗಳು ಸಭೆ ಮಾಡಿದ್ದಾರೆ. ಈಗ ನೀವು ಸಭೆ ಮಾಡಿದ್ದಿರಾ, ಇಷ್ಟು ದಿನ ಏನೂ ಮಾಡಿದಿರಿ. ನೀರಿನ ಬಗ್ಗೆ ಎಷ್ಟೆಲ್ಲ ಸಮಸ್ಯೆ ಇದೆ. ಇದರ ಬಗ್ಗೆ ಕೇಳಲು ನಾನು ನೀರಾವರಿ ಇಲಾಖೆಯ ಕಾರ್ಯದರ್ಶಿಗೆ ಕರೆ ಮಾಡಿದ್ದೆ. ಆದರೆ ನನ್ನ ಕರೆ ಸ್ವೀಕರಿಸಲಿಲ್ಲ. ನಾನೇನು ನನ್ನ ಸ್ವಂತ ಕೆಲಸಕ್ಕೆ ಕರೆ ಮಾಡಿದ್ನಾ.? ಆತ ಯಾರು ಅಂತ ವಿಚಾರಿಸಿದೆ. ಸಿದ್ದರಾಮಯ್ಯ ನವರ ದೂರದ ಸಂಬಂಧಿ ಇರಬೇಕು. ಆಡಳಿತ ಹೇಗೆ ನಡಿತಿದೆ ಎಂಬುವುದಕ್ಕೆ ಇದು ಉದಾಹರಣೆ ಎಂದರು.