ಬೆಂಗಳೂರು: ಕಿಡ್ನ್ಯಾಪ್ ಕೇಸ್ನಲ್ಲಿ ಜೈಲು ಪಾಲಾಗಿರುವ ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣ ವಿಲ ವಿಲ ಅಂತಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ರೇವಣ್ಣ ಚಡಪಡಿಸುತ್ತಿದ್ದಾರೆ. ರಾತ್ರಿ ನಿದ್ರೆ ಇಲ್ಲದೆಯೇ ಹೈರಾಣಾಗಿದ್ದಾರೆ. ಇದರ ಮಧ್ಯೆ ರೇವಣ್ಣಗೆ ಮತ್ತೊಂದು ಶಾಕ್ ಎದುರಾಗಿದೆ. ಇಂದಿನಿಂದ ಮೂರು ದಿನ ಸರ್ಕಾರಿ ರಜೆ ಹಿನ್ನೆಲೆ ಆಪ್ತರು, ಕುಟುಂಬಸ್ಥರಿಗೆ ರೇವಣ್ಣ ಭೇಟಿಗೆ ಅವಕಾಶವಿಲ್ಲ. ಆಪ್ತರ ಭೇಟಿಯಿಂದ ತನ್ನ ದುಗುಡ ಹೇಳಿಕೊಳ್ಳುತ್ತಿದ್ದರು. ಆ ಮೂಲಕ ಮನಸ್ಸು ಹಗುರ ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ಅದಕ್ಕೂ ಸರ್ಕಾರಿ ರಜೆ ಅಡ್ಡಿಯಾಗಿದೆ.
ಬೆಂಗಳೂರಿನ ಬಸವನಗುಡಿಯಲ್ಲಿರುವ ಹೆಚ್.ಡಿ.ರೇವಣ್ಣ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಎಸ್ಐಟಿ ಅಧಿಕಾರಿಗಳಿಂದ ಪಂಚನಾಮೆ ಸಾಧ್ಯತೆ ಹಿನ್ನೆಲೆ ಅಗತ್ಯವಿರುವ ಪರಿಕರಗಳ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೀಗಾಗಿ ಭದ್ರತೆ ನೀಡಲಾಗಿದೆ.
ಜಾಮೀನು ಸಿಗದ್ದಕ್ಕೆ ಜೈಲಿನಲ್ಲಿ ರೇವಣ್ಣ ಕಂಗಾಲು
ಜಾಮೀನು ನಿರೀಕ್ಷೆಯಲ್ಲಿದ್ದ ಹೆಚ್.ಡಿ.ರೇವಣ್ಣಗೆ ರಿಲೀಫ್ ಸಿಕ್ಕಿಲ್ಲ. ಜಾಮೀನು ಅರ್ಜಿ ವಿಚಾರಣೆಯನ್ನ ಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ಇದರಿಂದಾಗಿ ಕಂಗಾಲಾಗಿರುವ ಹೆಚ್.ಡಿ.ರೇವಣ್ಣ ಮತ್ತಷ್ಟು ಟೆನ್ಷನ್ಗೆ ಒಳಗಾಗಿದ್ದಾರೆ. ಬೇಲ್ ಸಿಗದ್ದಕ್ಕೆ ರೇವಣ್ಣ ಮತ್ತಷ್ಟು ಮಂಕಾಗಿದ್ದಾರೆ ಎನ್ನಲಾಗಿದೆ.