ಮೈಸೂರು: ಕಾಂಗ್ರೆಸ್ ನವರು ಇಂದು ಪೇಪರ್ ನಲ್ಲಿ ಅದ್ಯಾವುದೋ ಜಾಹಿರಾತು ಕೊಟ್ಟಿದ್ದಾರೆ. ದುಷ್ಟಶಕ್ತಿಗಳ ಎದುರು ಸತ್ಯದ ಜಯ ಅಂತೆ. ಕರ್ನಾಟಕ ರಾಜ್ಯವನ್ನ ವಾಮಾಮಾರ್ಗ, ಮೋಸದಿಂದ ಅಸ್ತಿರಗೊಳಿಸ್ತಿದ್ದಾರೆ ಅಂತ ಕೊಟ್ಟಿದ್ದಾರೆ. ಆದರೆ ವಾಮಾಮಾರ್ಗ, ಮೋಸವನ್ನ ಸ್ಥಿರಗೊಳಿಸಲು ಹೊರಟಿರೋ ಸರ್ಕಾರ ಇದು ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್ ಡಿ ಕೆ ವಾಗ್ದಾಳಿ ನಡೆಸಿದ್ದಾರೆ.
ನವರಾತ್ರಿ ಹಿನ್ನೆಲೆಯಲ್ಲಿ ನಾಡದೇವಿಯ ದರ್ಶನ ಪಡೆಯಲು ಚಾಮುಂಡಿ ಬೆಟ್ಟಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಇಂದು ಭೇಟಿ ನೀಡಿದ್ದರು. ಕೇಂದ್ರ ಸಚಿವರಾದ ಬಳಿಕ ಎರಡನೇ ಬಾರಿ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಎಚ್ ಡಿ ಕೆ ಶಕ್ತಿ ದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ಆಶೀರ್ವಾದ ಪಡೆದುಕೊಂಡಿದ್ದಾರೆ. ಈ ವೇಳೆ ಸಚಿವ ಎಚ್ ಡಿ ಕುಮಾರಸ್ವಾಮಿಗೆ ಹುಣಸೂರು ಶಾಸಕ ಹರೀಶ್ ಗೌಡ, ಎಂಎಲ್ಸಿ ಮಂಜೇಗೌಡ ಸೇರಿದಂತೆ ಸ್ಥಳೀಯ ಜೆಡಿಎಸ್ ನಾಯಕರು ಸಾಥ್ ನೀಡಿದರು. ಆದರೆ ಎಚ್ ಡಿ ಕೆ ಸ್ವಾಗತಕ್ಕೆ ಸ್ಥಳೀಯ ಶಾಸಕ ಜಿ ಟಿ ದೇವೇಗೌಡ ಗೈರಾಗಿದ್ದಾರೆ.
ದೇವಾಲಯದ ಭೇಟಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಇಂದು ಪೇಪರ್ ನಲ್ಲಿ ಅದ್ಯಾವುದೋ ಜಾಹಿರಾತು ಕೊಟ್ಟಿದ್ದಾರೆ. ದುಷ್ಟಶಕ್ತಿಗಳ ಎದುರು ಸತ್ಯದ ಜಯ ಅಂತೆ. ಕರ್ನಾಟಕ ರಾಜ್ಯವನ್ನ ವಾಮಾಮಾರ್ಗ, ಮೋಸದಿಂದ ಅಸ್ತಿರಗೊಳಿಸ್ತಿದ್ದಾರೆ ಅಂತ ಕೊಟ್ಟಿದ್ದಾರೆ. ಆದರೆ ವಾಮಾಮಾರ್ಗ, ಮೋಸವನ್ನ ಸ್ಥಿರಗೊಳಿಸಲು ಹೊರಟಿರೋ ಸರ್ಕಾರ ಇದು. ಇವರು ಯಾವತ್ತು ಸತ್ಯ ಧರ್ಮ ಉಳಿದಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡಿದ್ದಾರೆ. ಬಡವರಿಗೆ ಕೊಡುವ ಹಣವನ್ನ ವಾಲ್ಮೀಕಿ ನಿಗಮದಲ್ಲಿ ನುಂಗಿದ್ದಾರೆ. ಸರ್ಕಾರಕ್ಕೆ ಮೋಸ ಮಾಡಿ ಸೈಟ್ ತೆಗೆದುಕೊಂಡಿದ್ರು. ಬಳಿಕ ಪರಿಸ್ಥಿತಿ ವ್ಯತಿರಿಕ್ತವಾದಾಗ ವಾಪಸ್ಸು ಕೊಟ್ಟಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣ ದುರುಪಯೋಗ ಆಗಿದೆ. ಇವರೇ ಆರ್ಥಿಕ ಸಚಿವರು, ಇವರ ಇಲಾಖೆಗೆ ಸಂಬಂಧಪಟ್ಟ ಹಣ ಬಿಡುಗಡೆ ಆಗಿದೆ.
ಅದರ ಸತ್ಯಾಂಶಗಳು ಹೊರವರುವ ಕಾಲ ದೂರ ಇಲ್ಲ. ಸಿದ್ರಾಮಣ್ಣನ ಬಗ್ಗೆ ಹಿನಕಲ್ ಸಾಕಮ್ಮನ ಕೇಳಿದ್ರೆ ಗೊತ್ತಾಗುತ್ತೆ. ಯಾವ ವಾಮಾಮಾರ್ಗದಲ್ಲಿ ಸೈಟ್ ಪಡೆದಿದ್ದಾರೆ ಗೊತ್ತಾಗುತ್ತೆ ಇದೆಲ್ಲ ಇತಿಹಾಸ ಇದೆ. ಹಾಗಾಗಿ ಇಲ್ಲಿ ಸ್ಥಿರಗೊಳಿಸೋದು ಅಸ್ಥಿರ ಗೊಳಿಸೋದು ನಮ್ಮ ಕೈಯಲ್ಲಿಲ್ಲ ಎಲ್ಲ ಚಾಮುಂಡಿ ಅಮ್ಮನ ಕೈಯಲ್ಲಿದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇಂದು ಆಯುಧಪೂಜೆ ಹಿನ್ನೆಲೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ಬಂದಿದ್ದೇನೆ. ರಾಜ್ಯದ ಜನರಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥನೆ ಮಾಡಿದ್ದೇನೆ ಎಂದರು.ಇನ್ನು ಕೋವಿಡ್ ಹಗರಣದ ತನಿಖೆಗೆ ಎಸ್ಐಟಿ ರಚನೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ನಿನ್ನೆ ಕ್ಯಾಬಿನೆಟ್ ನಲ್ಲಿ ಎಸ್ಐಟಿ ತನಿಖೆ ಮಾಡ್ತೀನಿ ಅಂದಿದ್ದಾರೆ. ಅವರ ನಿರ್ಧಾರಕ್ಕೆ ನಮ್ಮದೇನು ತಕರಾರಿಲ್ಲ. ಆದರೆ ಇವರು ವಿರೋಧಪಕ್ಷದಲ್ಲಿದ್ದಾಗ ಕೋವಿಡ್ ಬಗ್ಗೆ ಚರ್ಚೆ ಮಾಡ್ತಿದ್ರು. ಇದೇ ಸಿದ್ದರಾಮಯ್ಯ ಸದನದಲ್ಲಿ ಚರ್ಚೆ ಮಾಡಿದ್ರು.ಸರ್ಕಾರ ರಚನೆ ಆಗಿ 15 ತಿಂಗಳಾಗಿದೆ. ಇಷ್ಟು ದಿನ ಸುಮ್ಮನಿದ್ದವರು, ಈಗ ತನಿಖೆ ಮಾಡ್ತಾರಾ.? ಅವರ ವೈಫಲ್ಯ ಮುಚ್ಚಿಕೊಳ್ಳಲು ಇವೆಲ್ಲ ಮಾಡ್ತಾರೆ ಎಂದು ಆರೋಪಿಸಿದ್ದಾರೆ.
ಹೆಚ್ಡಿಕೆ ಕೇವಲ ಆರೋಪ ಮಾಡದೇ ದಾಖಲೆ ನೀಡಲಿ ಎಂಬ ವಿಚಾರಕ್ಕೆ ತಿರುಗೇಟು ನೀಡಿರುವ ಕೇಂದ್ರ ಸಚಿವ, ನಾನು ಎಷ್ಟು ದಾಖಲೆ ಕೊಡಲಿ, ಈಗ ಕೊಟ್ಟಿರುವುದೇ ಅರಗಿಸಿಕೊಳ್ಳೋಕಾಗ್ತಿಲ್ಲ.ಕಾಂಗ್ರೆಸ್ ಮುಖಂಡರೇ ಇದರ ಬಗ್ಗೆ ಮಾತಾಡ್ತಾರೆ. ಪೆನ್ ಡ್ರೈವ್ ನಲ್ಲಿ ವರ್ಗಾವಣೆ ದಂಧೆ ಬಗ್ಗೆ ಇದ್ದಿದ್ದು. ಅಶ್ಲೀಲ ಚಿತ್ರ ಇರಲಿಲ್ಲ ಅದರಲ್ಲಿ. ನಾನು ಕಮಿಷನ್ ಹೊಡಿಬೇಕು ಅಂತಿದ್ರೆ ರೈತರ ಸಾಲ ಮನ್ನಾ ಮಾಡಬೇಕಾಗಿರಲಿಲ್ಲ.
ತಾಯಿ ಸನ್ನಿಧಾನದಲ್ಲಿ ಹೇಳ್ತಿದೇನೆ ನಾನು ಎರಡು ಬಾರಿ ಮುಖ್ಯಮಂತ್ರಿಯಾದಾಗಲೂ ಯಾರಿಗೂ ಒತ್ತಡ ಹಾಕಿ ಕಮಿಷನ್ ಪಡೆದಿಲ್ಲ ಎಂದಿದ್ದಾರೆ.
ಇನ್ನು ಡಿನ್ನರ್ ಮೀಟಿಂಗ್ ಬ್ರೇಕ್ ಫಾಸ್ಟ್ ಬಗ್ಗೆ ಮಾತನಾಡಿ, ಎಲ್ಲಾ ಅವರಿಗೆ ಸೇರಿದ್ದು. ಮುಖ್ಯಮಂತ್ರಿ ಬದಲಾವಣೆ ವಿಚಾರ ಅವರ ಪಕ್ಷಕ್ಕೆ ಸೇರಿದ್ದು.ನಾನು ಮುಖ್ಯಮಂತ್ರಿ ಇದ್ದಾಗ ಜಾತಿಗಣತಿ ವರದಿ ತಗೋಳ್ತಿಲ್ಲ ಅಂತ ಆರೋಪ ಮಾಡಿದ್ರು. ನಾನು 14 ತಿಂಗಳು ಸಿಎಂ ಆಗಿದ್ದೆ, ಅವರು ಬಂದು 15 ತಿಂಗಳಾಗಿದೆ. ಯಾಕೆ ವರದಿ ಬಿಡುಗಡೆ ಮಾಡಿಲ್ಲ. ಪ್ರತಿನಿತ್ಯ ಕುರಿಕಾಯೋನು, ಅದಕ್ಕೆ ಹೊಟ್ಟೆ ಉರಿ ಅಂತ ಹೇಳ್ಕೊಂಡು ತಿರುಗ್ತಾರೆ.
ಮೋದಿ ಟೀ ಮಾರಿಲ್ವಾ.? ನಾವು ಅಸೂಯೆ ಪಟ್ರೇ ಆಗುತ್ತಾ? ಜನ ತೀರ್ಮಾನ ಮಾಡ್ಬೇಕು? ಹತ್ತು ವರ್ಷದ ಹಿಂದೆಯೇ ಜಾತಿಗಣತಿ ರಿಪೋರ್ಟ್ ಮಾಡಿದ್ದಾಗಿದೆ. ಈಗ ಆ ಜಾತಿಗಣತಿ ಇಟ್ಕೊಂಡು ಏನು ಮಾಡ್ತೀರಿ?
ಇದು ಸಿದ್ದರಾಮಯ್ಯ ಆಫೀಸಲ್ಲಿ ಕುಳಿತು ಮಾಡಿದ ರಿಪೋರ್ಟ್ ಅಂತ ಕಾಂಗ್ರೆಸ್ ನವರೇ ಹೇಳ್ತಿದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.