ಬಿಜೆಪಿಗೆ ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಇಲ್ಲ ಅಂತಾ ಟೀಕಿಸ್ತಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಬಿಜೆಪಿ ಟೀಕೆ ಮಾಡುತ್ತಿದ್ದರು. ಈಗ ನಾನು, ಅಶೋಕಣ್ಣ ಜೋಡೆತ್ತಿನ ರೀತಿ ಕೆಲಸ ಮಾಡುತ್ತೇವೆ.ಅವರನ್ನು ತಡೆಯೋದು ಹೇಗೆ ಎಂದು ತಲೆ ಚಚ್ಚಿಕೊಳ್ಳುತ್ತಿದ್ದಾರೆ. ಮುಂದೆ ಆರ್.ಅಶೋಕ್ ಗುಡುಗಿದರೆ ವಿಧಾನಸಭೆ ನಡುಗಬೇಕು. ಆ ರೀತಿಯಲ್ಲಿ ಅಶೋಕ್ ಹೋರಾಟ ಮಾಡುತ್ತಾರೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದರು.