ಬೆಂಗಳೂರು: ಪ್ರಜ್ವಲ್ ರೇವಣ್ಣ ಹಾಗೂ ಎಚ್ಡಿ ರೇವಣ್ಣ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಈ ಪ್ರಕರಣದ ಹಿಂದೆ ರಾಜಕೀಯ ಕುತಂತ್ರ ಇದೆ ಎಂದು ಜೆಡಿಎಸ್ ನಾಯಕರು ಹಾಗೂ ಕೆಲ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದ್ರೆ, ವಿಪಕ್ಷ ನಾಯಕ ಆರ್ ಅಶೋಕ್, ಅವರು ಪ್ರಜ್ವಲ್ ಮತ್ತು ರೇವಣ್ಣ ವಿಚಾರದಲ್ಲಿ ಖಡಕ್ ಮಾತುಗಳನ್ನಾಡಿದ್ದು ಅಚ್ಚರಿಗೆ ಕಾರಣವಾಗಿದೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಮಾಜಿ ಸಚಿವ ಹೆಚ್.ಡಿ.ರೇವಣ್ಣರನ್ನು ಬಂಧಿಸಿದ್ದು ಸರಿಯಾಗಿದೆ. ಇನ್ನು ನಮ್ಮ ಹೊಂದಾಣಿಕೆಯಲ್ಲಿ ಪ್ರಜ್ವಲ್ ರೇವಣ್ಣ ಇನ್ನೂ ಗೆದ್ದಿಲ್ಲ. ಗೆದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಹಲ್ಚಲ್ ಎಬ್ಬಿಸಿದ್ದಾರೆ.
ಮಹಿಳೆ ಕಿಡ್ನ್ಯಾಪ್ ಕೇಸ್ನಲ್ಲಿ ರೇವಣ್ಣ ಬಂಧನದ ಬಗ್ಗೆ ಮಾತನಾಡಿರುವ ಅಶೋಕ್, ಮಾಜಿ ಸಚಿವ ಹೆಚ್.ಡಿ.ರೇವಣ್ಣರನ್ನು ಬಂಧಿಸಿದ್ದು ಸರಿಯಾಗಿದೆ. ಪೊಲೀಸರ ಕಾರ್ಯಕ್ಕೆ ನಾನು ಶ್ಲಾಘಿಸುತ್ತೇನೆ. ಬಂಧಿತ ಎಚ್.ಡಿ.ರೇವಣ್ಣ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸ್ಪಷ್ಟಪಡಿಸಿದರು.
ಇನ್ನು ಪ್ರಜ್ವಲ್ ರೇವಣ್ಣ ಅವರ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಅಶೋಕ್ ಅವರು, ಪ್ರಜ್ವಲ್ ಅವರು ಗೆದ್ರೆ ಅವರ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ. ಅವರನ್ನ ಉಚ್ಚಾಟನೆ ಮಾಡುತ್ತೇವೆ. ನಮ್ಮ ಹೊಂದಾಣಿಕೆಯಲ್ಲಿ ಪ್ರಜ್ವಲ್ ರೇವಣ್ಣ ಇನ್ನೂ ಗೆದ್ದಿಲ್ಲ. ಪ್ರಜ್ವಲ್ ಗೆದ್ದರೆ ಅವರ ಪಕ್ಷದ ನಾಯಕರು ಕ್ರಮ ಕೈಗೊಳ್ಳಲಿ. ನಾವು ಕೂಡ ಕಾನೂನು ರೀತಿ ಕ್ರಮ ಕೈಗೊಳ್ಳುತ್ತೇವೆ ಎಂದು ಖಡಕ್ ಆಗಿ ಹೇಳಿದರು.
ಜೆಡಿಎಸ್ ಜತೆ ಹೊಸದಾಗಿ ನಮ್ಮ ಮೈತ್ರಿ ಆಗಿದೆ. ಹೀಗಾಗಿ ಪ್ರಜ್ವಲ್ ಗೆ ಟಿಕೆಟ್ ಕೊಡಲಾಗಿದ್ದು, ಈಗಾಗಲೇ ಜೆಡಿಎಸ್ ಅವರನ್ನ ಸಸ್ಪೆಂಡ್ ಸಹ ಮಾಡಿದೆ. ಆದ್ರೆ, ಪ್ರಜ್ವಲ್ ಗೆದ್ದ ಮೇಲೆ ಜೆಡಿಎಸ್ ಸಂಸದ ಆಗುತ್ತಾರಾ? ಅಥವಾ ಎನ್ಡಿಎ ಸಂಸದರಾಗುತ್ತಾರಾ ಎಂಬ ಗೊಂದಲ ಇದೆ. ಈ ಬಗ್ಗೆ ವರುಷ್ಠರಿಂದ ಸ್ಪಷ್ಟನೆ ಪಡೆಯುತ್ತೇವೆ. ನಂತರ ನೋಡಿಕೊಂಡು ಪ್ರಜ್ವಲ್ ವಿರುದ್ಧ ಕ್ರಮದ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.