ಬೆಂಗಳೂರು: ಶಾಮನೂರು ಶಿವಶಂಕರಪ್ಪ ನಮ್ಮ ಸಮುದಾಯ, ಪಕ್ಷದ ಹಿರಿಯ ನಾಯಕರು. ಶಾಮನೂರು ಶಿವಶಂಕರಪ್ಪನವರ ಭಾವನೆಗಳನ್ನು ಅರ್ಥ ಮಾಡಿಕೊಂಡಿದ್ದೇವೆ. ಸಮುದಾಯದ ಅಧಿಕಾರಿಗಳಿಗೆ ಆ ರೀತಿ ಆಗಿದ್ದರೆ ಚರ್ಚಿಸಿ ಬಗೆಹರಿಸುತ್ತೇವೆ. ಸಿದ್ದರಾಮಯ್ಯ ಸಂಪುಟದಲ್ಲಿ ಲಿಂಗಾಯತ ಸಮುದಾಯದ 7 ಜನ ಸಚಿವರಿದ್ದೇವೆ. ಹಿರಿಯರು ಹೇಳಿರುವ ವಿಚಾರದ ಬಗ್ಗೆ ಸಂಬಂಧಿಸಿದವರ ಜೊತೆ ಮಾತಾಡುತ್ತೇವೆ. ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ಸಮಸ್ಯೆಯಾಗಿದ್ದರೆ ಸಿಎಂ ಗಮನಕ್ಕೆ ತರುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೇಳಿದರು.