ಸಹಾಯಕ ಕೃಷಿನಿರ್ದೇಶಕಿ ಕೆ.ಹೆಚ್.ಸಪ್ನ ಮಾಹಿತಿ
ಪ್ರತಿನಿಧಿ ವರದಿ ಹೊಳೆನರಸೀಪುರ
ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆಯಿಂದ ಕೃಷಿ ಉತ್ಪಾದನೆಯನ್ನು ಉತ್ತಮ ಪಡಿಸಿ ಆದಾಯವನ್ನು ಹೆಚ್ಚಿಸುವ ಉದ್ದೇಶದಿಂದ ಕೃಷಿ ಭಾಗ್ಯ ಯೋಜನೆಯನ್ನು ತಾಲೂಕಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳಿ ಅರ್ಜಿ ಆಹ್ವಾನಿಸಿದೆ ಎಂದು ಸಹಾಯಕ ಕೃಷಿನಿರ್ದೇಶಕಿ ಕೆ.ಹೆಚ್.ಸಪ್ನ ತಿಳಿಸಿದ್ದಾರೆ.
ಕೃಷಿ ಭಾಗ್ಯ ಯೋಜನೆಯನ್ನು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನ ಗೊಳಿಸಲಾಗುತ್ತಿದ್ದು, ಕ್ಷೇತ್ರ ಬದು, ಕೃಷಿ ಹೊಂಡ, ನೀರು ಹಿಂಗದಂತೆ ತಡೆಯಲು ಪಾಲಿಥಿನ್ ಹೊದಿಕೆ, ತಂತಿ ಬೇಲಿ, ಹೊಂಡದಿಂದ ನೀರು ಎತ್ತಲು ಡೀಸೆಲ್ ಪಂಪ್ ಸೆಟ್ ಅಥಾವ ಸೋಲಾರ್ ಪಂಪ್ ಸೆಟ್, ನೀರನ್ನು ಹಾಯಿಸಲು ತುಂತುರು, ಹನಿ ನೀರಾವರಿ ಘಟಕಗಳು ಈಗೆ 6 ಕಡ್ಡಾಯ ಘಟಕಗಳನ್ನು ಒಳಗೊಂಡಿದೆ. ಎಲ್ಲ ಘಟಕಗಳನ್ನು ತಪ್ಪದೇ ಅಳವಡಿಸಿಕೊಂಡು ಫಲಾನುಭವಿ ರೈತರು ಯೋಜನೆಯ ಸಮಗ್ರ ಸದುಪಯೋಗ ಪಡೆಯಬೇಕು ಎಂದು ಕೋರಿದೆ. ಈ ಯೋಜನೆಯಲ್ಲಿ ಸಾಮಾನ್ಯ ವರ್ಗಕ್ಕೆ 80% ಹಾಗೂ ಪರಿಶಿಷ್ಟ ಜಾತಿ, ಪಂಗಡಕ್ಕೆ 90% ಸಹಾಯಧನ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಿದೆ.