ಮೈಸೂರು : ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲೇ ಕ್ಷೀರಭಾಗ್ಯದ ಹಾಲಿನ ಪುಡಿಯನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ. ಹುಣಸೂರು ತಾಲೂಕಿನ ಮಾದಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಿಂದ ಅಕ್ರಮವಾಗಿ ಹಾಲಿನ ಪುಡಿ ಸಾಗಿಸುತ್ತಿದ್ದನ್ನು ಗ್ರಾಮಸ್ಥರು ಪತ್ತೆ ಹಚ್ಚಿದ್ದಾರೆ. ಸರ್ಕಾರ ಕ್ಷೀರಭಾಗ್ಯ ಯೋಜನೆಯಡಿ ಮಕ್ಕಳು ಹಾಗೂ ಗರ್ಭಿಣಿಯರಿಗೆ ಹಾಲಿನ ಪುಡಿ ನೀಡುತ್ತದೆ.
ಆದರೆ ದುರುಳರು ಈ ಹಾಲಿನ ಪುಡಿಯನ್ನು ಅಕ್ರವಾಗಿ ಬೇರೆಡೆ ಸಾಗಿಸಲು ಯತ್ನಿಸಿದ್ದರು. ಇದನ್ನು ತಿಳಿದ ಗ್ರಮಾಸ್ಥರು ಅಕ್ರವಾಗಿ ಸಾಗಿಸುತ್ತಿದ್ದ ಹುಣಸೂರಿನ ಶಬ್ಬೀರ್ ನಗರದ ಅಪ್ಸರ್ ಪಾಷಾನನ್ನು ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ. ಅರ್ಧ ಕೆ.ಜಿಯ 40 ಪ್ಯಾಕೆಟ್ ಹಾಲಿನ ಪುಡಿ ಸಹಿತ ವಶಕ್ಕೆ ಪಡೆದುಕೊಂಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.