ಬೆಂಗಳೂರು: ಬಿಸಿಲ ಬೇಗೆಯಿಂದ ಬಸವಳಿದಿದ್ದ ಕರ್ನಾಟಕದಲ್ಲಿ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ. ಆದರೆ, ಮಳೆಯು ಸಂತಸದ ಜತೆ ಸಂಕಟವನ್ನೂ ತಂದಿದೆ. ತಡವಾಗಿ ಆರಂಭವಾದ ಪೂರ್ವ ಮುಂಗಾರು ಮಳೆ ತುಸು ತಂಪೆರೆದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಶುಕ್ರವಾರ ಮಳೆಯಾಗಿದೆ. ಈ ಮಧ್ಯೆ, ಸಿಡಿಲು ಬಡಿದು ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದಲ್ಲಿ ರೈತರೊಬ್ಬರು ಮೃತಪಟ್ಟಿದ್ದಾರೆ. ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ಸಿಡಿಲು ಬಡಿದು ರಾಕೇಶ್ ಕೊನೆಯುಸಿರೆಳೆದಿದ್ದಾರೆ.