ಕೊಟ್ಟಿಗೆಗೆ ಬೆಂಕಿ ಬಿದ್ದು, ಸುಮಾರು 200 ಕೋಳಿಗಳು, 50 ಕುರಿ, 6 ಹಸುಗಳು ಸಜೀವ ದಹನವಾಗಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ರಾಮಘಟ್ಟ ಗ್ರಾಮದಲ್ಲಿ ಕೋಳಿ ಸಾಕಾಣಿಕೆ ಮಾಡುತ್ತಿದ್ದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಪರಿಣಾಮ ಕೊಟ್ಟಿಯಲ್ಲಿದ್ದ ಎಲ್ಲ ಕೋಳಿ ಮತ್ತು ಪ್ರಾಣಿಗಳು ಸಾವನ್ನಪ್ಪಿವೆ.
ಹಸು, ಕುರಿ, ಕೋಳಿಗಳು ಗ್ರಾಮದ ರೈತ ಚೇತನ್ ಕುಮಾರ್ ಎಂಬುವರಿಗೆ ಸೇರಿದ್ದವು ಎಂದು ತಿಳಿದುಬಂದಿದೆ. ಸಾಕು ಪ್ರಾಣಿಗಳನ್ನು ಕಳೆದುಕೊಂಡಿರುವ ಚೇತನ್ ಕುಟುಂಬ ಕಂಗಾಲಾಗಿದೆ.