ಪ್ರತಿನಿಧಿ ವರದಿ ಮದ್ದೂರು
ಕ್ಷೇತ್ರದಲ್ಲಿ ತೆಂಗಿನಮರಗಳಿಗೆ ತಲೆದೋರಿರುವ ಕಪ್ಪು ತಲೆ ಹುಳು ರೋಗವನ್ನು ಸಂಪೂರ್ಣವಾಗಿ ಹೋಗಲಾಡಿಸಲು ಸದನದಲ್ಲಿ ಧ್ವನಿ ಎತ್ತಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ತಾಲೂಕಿನ ಚಾಮನಹಳ್ಳಿ ಹಾಗೂ ಮುದಿಗೆರೆ ಗ್ರಾಮಗಳಲ್ಲಿ 2023-24ನೇ ಸಾಲಿನ ಮದ್ದೂರು ತಾಪಂ ಅನಿರ್ಬಂದಿತ ಅನುದಾನದಲ್ಲಿ ನಿರ್ಮಿಸಿರುವ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ತೆಂಗಿನ ಮರಕ್ಕೆ ಕಪ್ಪು ತಲೆ ಹುಳು ಕೀಟ ಬಾಧೆ ಕಾಣಿಸಿಕೊಂಡು ತೆಂಗಿನ ಮರಗಳು ಒಣಗುವ ಮೂಲಕ ರೈತರಿಗೆ ಆರ್ಥಿಕ ಸಂಕಷ್ಟ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸದನದಲ್ಲಿ ಈ ಸಂಬಂಧ ಸರ್ಕಾರದ ಗಮನಕ್ಕೆ ತಂದು ಕೀಟ ಬಾಧೆ ನಿಯಂತ್ರಣ ಹಾಗೂ ತೆಂಗುಬೆಳೆಗಾರರಿಗೆ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಹೋರಾಟ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೇಶಹಳ್ಳಿ ಆರ್.ಮೋಹನ್ಕುಮಾರ್, ಮುಖಂಡರಾದ ಕುಚೇಲ, ಶೇಖರ್, ರಾಜೇಶ್, ಮಾದೇಶ್, ರಾಜಯ್ಯ, ರವಿ, ಮೋಹನ್, ಅನಂತು ಸೇರಿದಂತೆ ಇತರರು ಇದ್ದರು.