ಹಾಸನ: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಜೂ.25 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕೈಗಾರಿಕಾ ಸ್ಪಂದನಾ ಸಭೆಯನ್ನು ಏರ್ಪಡಿಸಲಾಗಿದೆ.
ಸಭೆಯಲ್ಲಿ ಉದ್ದಿಮೆದಾರರ ಸಮಸ್ಯೆಗಳನ್ನು ಚರ್ಚಿಸಲಾಗುವುದು. ಉದ್ದಿಮೆದಾರರು ಉದ್ಯಮಗಳ ಸಮಸ್ಯೆಗಳನ್ನು ಲಿಖಿತ ರೂಪದಲ್ಲಿ ಜೂ.24 ರ ಒಳಗಾಗಿ ಇ-ಮೇಲ್ jddic.hassan@gmail.com ಮುಖಾಂತರ ಅಥವಾ ಖುದ್ದಾಗಿ ಈ ಕಾರ್ಯಾಲಯಕ್ಕೆ ಸಲ್ಲಿಸಲು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.