ಮೈಸೂರು: ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡಿದರೆ, ಮುಖ್ಯಮಂತ್ರಿಗಳ ಗಮನಕ್ಕೆ ತಂದು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದೆಂದು ಮಾಜಿ ಶಾಸಕಡಾ. ಯತೀಂದ್ರ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
ವರುಣ ಕ್ಷೇತ್ರದ ಗೆಜ್ಜಗನಹಳ್ಳಿ, ಹಾರೋಪುರ, ಸಾಲುಂಡಿ, ತಾಯೂರು, ಬೀರಿಹುಂಡಿ, ಈಶ್ವರಗೌಡನ ಹುಂಡಿ, ವಡ್ಡರಹುಂಡಿ ಗ್ರಾಮಗಳಲ್ಲಿ ಜನಸಂಪರ್ಕ ಸಭೆ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.
ಚುನಾವಣೆ ಕಳೆದ ನಂತರ ಬರಲು ಸಾಧ್ಯವಾಗಿರಲಿಲ್ಲ. ಏಕೆಂದರೆ ನನಗೆ ಯಾವುದೇ ಸಾಂವಿಧಾನಿಕ ಹುದ್ದೆ ಇರಲಿಲ್ಲ. ಆದ್ದರಿಂದ ಈಗ ಬಂದು ನಿಮ್ಮ ಸಮಸ್ಯೆಗಳನ್ನು ಕೇಳುತ್ತಿದ್ದೇನೆ. ನಮ್ಮ ತಂದೆಯವರಿಗೆ ಹೆಚ್ಚಿನ ಬಹುಮತ ನೀಡಿ ಗೆಲ್ಲಿಸುವುದರ ಮೂಲಕ 2ನೇ ಬಾರಿಗೆ ನಿಮ್ಮೆಲ್ಲರ ಆಶೀರ್ವಾದದಿಂದ ಮುಖ್ಯಮಂತ್ರಿ ಆಗಿದ್ದಾರೆ. ನಿಮ್ಮ ಎಲ್ಲ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹರಿಸಲು ಪ್ರಯತ್ನಿಸುತ್ತೇನೆ ಎಂದರು.
ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಕೆ.ಎನ್. ವಿಜಯ್, ಆಪ್ತ ಸಹಾಯಕರಾದ ಶಿವಸ್ವಾಮಿ, ಪ್ರದೀಪ್ಕುಮಾರ್, ಇಒ ರಾಜೇಶ್, ಗ್ರಾಪಂ ಅಧ್ಯಕ್ಷೆ ಮಣಿಕೃಷ್ಣ, ಉಪಾಧ್ಯಕ್ಷೆ ಬಸಮ್ಮ, ಮಹಾದೇವ ಪ್ರಸಾದ್, ವಿಠಲ, ರಂಗಸ್ವಾಮಿ, ರಾಜೇಶ, ಕೆಂಪಣ್ಣ ಇದ್ದರು.