ಕೋಲಾರ ಸಂಸದ ಮುನಿಸ್ವಾಮಿ ಕರೆ । ಮೈತ್ರಿಕೂಟದ ಸಭೆ
ಕೋಲಾರ: ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ಪೂರಕವಾದ ವಾತಾವರಣವಿದ್ದು, ರಾಜ್ಯದಲ್ಲಿ ಜೆಡಿಎಸ್ ಪಕ್ಷವು ಎಲ್ಲಿದೆ ಎಂದು ಪ್ರಶ್ನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಷೇತ್ರದ ಮತದಾರರು ಚುನಾವಣೆಯಲ್ಲಿ ತಕ್ಕ ಉತ್ತರ ನೀಡಬೇಕು ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ನಗರದ ಹೊರವಲಯದ ನಾರಾಯಣಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜೆಡಿಎಸ್ ಮತ್ತು ಬಿಜೆಪಿ ಸಮನ್ವಯ ಸಭೆಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಜೆಡಿಎಸ್ ಎಲ್ಲಿದೆ ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದರು, ಅಲ್ಲಿಂದಲೇ ನಾಯಕನಾಗಿ ತಯಾರಾಗಿ ಬಂದಿರೊದು ಅನ್ನುವುದನ್ನು ಸಿದ್ದರಾಮಯ್ಯ ಮರೆಯಬಾರದು. ನನಗೆ ಟಿಕೆಟ್ ಸಿಕ್ಕಿಲ್ಲ ಅಂತ ಕುಗ್ಗಿಲ್ಲ, ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡುತ್ತೆನೆ. ಬೂತ್ ಮಟ್ಟದಿಂದ ಕೆಲಸ ಮಾಡಬೇಕು, ಸಣ್ಣ ಪುಟ್ಟ ವ್ಯತ್ಯಾಸಗಳನ್ನು ಸರಿಪಡಿಸಿಕೊಳ್ಳಬೇಕು ಎಂದರು.
ದಾಸರಹಳ್ಳಿ ಕ್ಷೇತ್ರದ ಶಾಸಕ ಮುನಿರಾಜು ಮಾತನಾಡಿ, ದೇಶ ಮತ್ತು ರಾಜ್ಯದ ಹಿತದೃಷ್ಟಿಯಿಂದ ಜೆಡಿಎಸ್ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ದ ಜನ ಬೇಸತ್ತು ಹೋಗಿದ್ದಾರೆ. ಎನ್ಡಿಎಗೆ ಕೋಲಾರ ಮೊದಲ ಜಯ ಸಿಕ್ಕಿದೆ. ಮುಂದೆ ಮೈತ್ರಿಕೂಟದ ಜೋಡೆತ್ತುಗಳ ರೀತಿಯಲ್ಲಿ ಕೆಲಸ ಮಾಡಲಿದ್ದಾರೆ ಎಂದರು.
ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಮಾತನಾಡಿ, ಚುನಾವಣೆಯಲ್ಲಿ ಸಮನ್ವಯ ಸಾಧನೆಯಾದಾಗ ಮಾತ್ರ ಮೈತ್ರಿ ಅಭ್ಯರ್ಥಿ ಗೆಲುವು ಖಚಿತ. ಕೋಲಾರ ಕ್ಷೇತ್ರದಲ್ಲಿ ಭಿನ್ನಾಭಿಪ್ರಾಯಗಳು ಇಲ್ಲ, ಬೇರೆ ಕ್ಷೇತ್ರಗಳಲ್ಲಿ ಬಂಡಾಯದ ಭಾವುಟಗಳು ಹಾರಾಡುತ್ತಿವೆ, ಕಳೆದ ವಿಧಾನಸಭೆಯಲ್ಲಿ ಸೋತಿರುವ ಪ್ರತಿಕಾರ ತಿರಿಸಿಕೊಳ್ಳಲು ಕಾಂಗ್ರೆಸ್ನ್ನು ಸೋಲಿಸಬೇಕು
ಲೋಕಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ನಾಯಕತ್ವ ಕೊರತೆಯಿದೆ. ಎಸ್ಸಿ, ಎಸ್ಟಿ ಸೇರಿದಂತೆ ಅಲ್ಪಸಂಖ್ಯಾತರ ಮತಗಳನ್ನು ಸೆಳೆಯಬೇಕು. ಎಂಎಲ್ಎ, ಎಂಎಲ್ಸಿಗಳಾಗಿ ಕೆಲವರು ಒಂದು ವರ್ಷದಿಂದ ಸೋಕಿನಿಂದ ಓಡಾಡುತ್ತಿದ್ದಾರೆ. ಇದನ್ನು ಅಣಗಿಸಬೇಕು ಎಂದರು.
ಶಾಸಕ ಸಮೃದ್ಧಿ ಮಂಜುನಾಥ್ , ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಎನ್ಡಿಎ ಅಭ್ಯರ್ಥಿ ಮಲ್ಲೇಶ್ ಬಾಬು ಮಾತನಾಡಿದರು. ಎಂಎಲ್ಸಿಗಳಾದ ಇಂಚರ ಗೋವಿಂದರಾಜು, ಕೇಶವ ಪ್ರಸಾದ್, ವೈ.ಎ.ನಾರಾಯಣಸ್ವಾಮಿ, ಶಾಸಕ ರವಿ ಕುಮಾರ್, ಮಾಜಿ ಶಾಸಕರಾದ ಜೆ.ಕೆ ಕೃಷ್ಣಾರೆಡ್ಡಿ, ರಾಜಣ್ಣ, ಕೆ.ಎಸ್ ಮಂಜುನಾಥ್ ಗೌಡ, ವೆಂಕಟಮುನಿಯಪ್ಪ, ವೈ ಸಂಪಂಗಿ, ಎಂ.ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಕೆ.ಎನ್.ವೇಣುಗೋಪಾಲ್ ಮುಖಂಡರಾದ ಸಿಎಂಆರ್ ಶ್ರೀನಾಥ್, ಕೆ.ಚಂದ್ರಾರೆಡ್ಡಿ, ವಡಗೂರು ಹರೀಶ್, ವಕ್ಕಲೇರಿ ರಾಮು, ಕಾಡೇನಹಳ್ಳಿ ನಾಗರಾಜ್, ಗಾಯಿತ್ರಿ ಮುತ್ತಪ್ಪ ಮುಂತಾದವರು ಹಾಜರಿದ್ದರು.