ನವದೆಹಲಿ : ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಏ.15ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಆದೇಶ ಹೊರಡಿಸಿದೆ. ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮಾರ್ಚ್ 21 ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು.
ಬಳಿಕ ಇಡಿ ಕೇಜ್ರಿವಾಲ್ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿತ್ತು. ನ್ಯಾಯಾಲಯ ಮಾರ್ಚ್ 28ರ ವರಗೆ ಇಡಿ ಕಸ್ಟಡಿಗೆ ನೀಡಿತ್ತು. ಮಾರ್ಚ್ 28 ರಂದು ಇಡಿ ಕೇಜ್ರಿವಾಲ್ ಅವರನ್ನು ಮತ್ತೆ ನ್ಯಾಯಾಲದ ಮುಂದೆ ಹಾಜರುಪಡಿಸಿ, ಇನ್ನೂ ಏಳು ದಿನ ನಮ್ಮ ಕಸ್ಟಡಿಗೆ ನೀಡಬೇಕೆಂದು ಇಡಿ ಕೋರಿತ್ತು. ಆದರೆ ನ್ಯಾಯಾಲಯ ಏ.01ರವರೆಗೆ ಇಡಿ ಕಸ್ಟಡಿಗೆ ನೀಡಿತ್ತು. ಇಂದು ಇಡಿ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ನ್ಯಾಯಾಂಗದ ಮುಂದೆ ಹಾಜರು ಪಡಿಸಿತು. ರೋಸ್ ಅವೆನ್ಯೂ ನ್ಯಾಯಾಲಯ ಏ.15ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.