ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾ ಕಣ ರಂಗೇರುತ್ತಿದ್ದು, ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಆರಂಭಿಸಲು ಕಾಂಗ್ರೆಸ್ ಮುಖಂಡರು ಸಜ್ಜಾಗುತ್ತಿದ್ದಾರೆ. ಸ್ಟಾರ್ ಪ್ರಚಾರಕಿಯಾಗಿ ಮಾಜಿ ಸಂಸದೆ ನಟಿ ರಮ್ಯ ಕರೆತರಲು ಕೈ ನಾಯಕರು ಪ್ಲ್ಯಾನ್ ಮಾಡಿದ್ದು, ನಟಿ ರಮ್ಯ ಅವರ ಪಾಪ್ಯುಲಾರಿಟಿ ಬಳಸಿಕೊಳ್ಳಲು ಕಾಂಗ್ರೆಸ್ಸಿಗರು ಲೆಕ್ಕಾಚಾರ ಹಾಕುತ್ತಿದ್ದಾರೆ. ಮಂಡ್ಯ ಸೇರಿದಂತೆ ಹಳೆ ಮೈಸೂರು ಭಾಗದಲ್ಲಿ ತಮ್ಮದೇ ಪಾಪ್ಯುಲಾರಿಟಿ ಹೊಂದಿರುವ ನಟಿ ರಮ್ಯ , 2023ರ ವಿಧಾನಸಭಾ ಚುನಾವಣೆಯಲ್ಲೂ ಮೈಸೂರು, ಮಂಡ್ಯದಲ್ಲಿ ಸಿದ್ದರಾಮಯ್ಯ, ಮಹದೇವಪ್ಪ, ದರ್ಶನ್ ಧ್ರುವನಾರಾಯಣ್ ಪರ ಪ್ರಚಾರ ನಡೆಸಿದ್ದರು. ಹೀಗಾಗಿ ಲೋಕಸಭೆ ಚುನಾವಣೆಗೂ ಮೈಸೂರು, ಮಂಡ್ಯ ಕ್ಷೇತ್ರಗಳಲ್ಲಿ ಮಾಜಿ ಸಂಸದೆ ರಮ್ಯರಿಂದ ಪ್ರಚಾರ ಮಾಡಿಸಿಲು ಪ್ಲಾನ್ ಮಾಡಲಾಗಿದೆ.