ಪ್ರತಿನಿಧಿ ವರದಿ ಕೂಡಿಗೆ
ತೆರಿಗೆ ಪಾವತಿಯಲ್ಲಿ ಕೊಡಗು ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿರುವುದು ಹೆಮ್ಮೆಯ ವಿಚಾರ ಎಂದು ಜಿಲ್ಲಾ ಚೇಂಬರ್ ಅಪ್ ಕಾಮರ್ಸ್ ಉಪಾಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಅಭಿಪ್ರಾಯ ಪಟ್ಟರು.
ಕುಶಾಲನಗರ ಚೇಂಬರ್ ಅಪ್ ಕಾಮರ್ಸ್ ವತಿಯಿಂದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ವರ್ತಕರ ಸ್ನೇಹ ಮಿಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕುಶಾಲನಗರದಲ್ಲಿ 1991 ಚೇಂಬರ್ ಅಪ್ ಕಾಮರ್ಸ್ ಪ್ರಾರಂಭವಾಯಿತ್ತು. ಅಧಿಕಾರಿಗಳು ವರ್ತಕರಿಗೆ ಅನಾವಶ್ಯಕ ಕಿರುಕುಳ ನೀಡಿರುವ ಸಾಕಷ್ಟು ಉದಾಹರಣೆಗಳಿವೆ. ಚೇಂಬರ್ ಪದಾಧಿಕಾರಿಗಳು ವರ್ತಕರ ಪರವಾಗಿ ನಿಂತು ತೊಂದರೆಯಾಗುವುದನ್ನು ತಪ್ಪಿಸಿದ್ದರು. ಸಂಘದಿಂದ ವರ್ತಕರಿಗೆ ಪ್ರಯೋಜನ ಇದೆ. ತೆರಿಗೆ ಪಾವತಿಯಲ್ಲಿನ ಕೊಡುಗೆ ಮೆಚ್ಚುವ ವಿಚಾರ ಎಂದು ಅವರು ಹೇಳಿದರು.
ಜಿಲ್ಲಾ ಚೇಂಬರ್ ಅಪ್ ಕಾಮರ್ಸ್ ನಿರ್ದೇಶಕ ಎಸ್.ಕೆ.ಸತೀಶ್ ಮಾತನಾಡಿ, ವರ್ತಕರ ದಿನಾಚರಣೆಯನ್ನು ಆಚರಿಸುವಂತಾಗಬೇಕು. ಕುಶಾಲನಗರ ಸ್ಥಾನಿಯ ಸಮಿತಿ ವತಿಯಿಂದ ಉದ್ದೇಶಿಸಿರುವ ವರ್ತಕರ ಭವನಕ್ಕೆ ಸದಸ್ಯರು ಹೆಚ್ಚಿನ ಬೆಂಬಲ ನೀಡಬೇಕೆಂದರು.
ಉದ್ಯಮಿ ರವೀಂದ್ರ. ವಿ.ರೈ ಮಾತನಾಡಿ, ವರ್ತಕರ ಸಹಕಾರದಿಂದ ಸಂಘಟನೆ ಮತ್ತಷ್ಟು ಬಲಪಡಿಸಿತ್ತೇವೆ. ಭವನ ನಿರ್ಮಾಣಕ್ಕೆ ಬಹುತೇಕ ಎಲ್ಲ ತಯಾರಿಗಳು ಆಗಿದೆ. ಸದ್ಯದಲ್ಲೇ ಅದರ ನಿರ್ಮಾಣ ಮಾಡುವ ಸಲುವಾಗಿ ಸರ್ವರ ಸಹಕಾರ ಕೇಳಿಕೊಂಡರು.
ಕುಶಾಲನಗರ ಸ್ಥಾನಿಯ ಸಮಿತಿಯ ಸ್ಥಾಪಕ ಅಧ್ಯಕ್ಷ ಪಿ.ಪಿ.ಸತ್ಯನಾರಾಯಣ, ಮಾಜಿ ಅಧ್ಯಕ್ಷ ಬಿ.ಅಮೃತ್ ರಾಜ್, ಕಾರ್ಯದರ್ಶಿ ಕೆ.ಎಸ್.ನಾಗೇಶ್, ಕಾರ್ಯಕ್ರಮ ನಿರ್ದೇಶಕ ಕೆ.ಎನ್.ದೇವರಾಜ್, ಉಪಾಧ್ಯಕ್ಷ ಎಂ.ಡಿ.ರಂಗಸ್ವಾಮಿ, ನಿರ್ದೇಶಕರಾದ ಎನ್.ವಿ.ಬಾಬು, ಚಿತ್ರ, ರೂಪ, ಚಂದ್ರು, ಎಂ.ಕೆ.ದಿನೇಶ್ ಇದ್ದರು.
ಫೋಟೋ 12 ಎಂಡಿಕೆ 03 ; ಕುಶಾಲನಗರ ಚೇಂಬರ್ ಅಪ್ ಕಾಮರ್ಸ್ ಆಯೋಜಿಸಿದ್ದ ವರ್ತಕರ ಸ್ನೇಹ ಮಿಲನ ಉದ್ಘಾಟಿಸಲಾಯಿತು.