ಸಾಂಸ್ಕೃತಿಕ ಪ್ರಶಸ್ತಿಗೆ ಅಜ್ಜಮಾಡ ರಮೇಶ್ ಕುಟ್ಟಪ್ಪ ಭಾಜನ
ಸ್ಫೂರ್ತಿಯ ಸಾಧಕಿ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ವರದಿಗೆ ಮನ್ನಣೆ
ಪ್ರತಿನಿಧಿ ವರದಿ ಮಡಿಕೇರಿ
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟಿಸಲಾಗಿದ್ದು, ಪ್ರತಿನಿಧಿ ಪತ್ರಿಕೆ ವರದಿಗೆ ಸಾಂಸ್ಕೃತಿಕ ಪ್ರಶಸ್ತಿ ಲಭಿಸಿದೆ.
ಇಂದಿರಾ ಸತ್ಯನಾರಾಯಣ ತಂದೆ ಸಾಹಿತಿ ಡಿ.ಕೃಷ್ಣಯ್ಯ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಸಾಂಸ್ಕೃತಿಕ ವರದಿ ಪ್ರಶಸ್ತಿಯನ್ನು ಪ್ರತಿನಿಧಿ ಪತ್ರಿಕೆಯಲ್ಲಿ ಪ್ರಕಟವಾದ ಸ್ಫೂರ್ತಿಯ ಸಾಧಕಿ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ವರದಿಗೆ ಅಜ್ಜಮಾಡ ರಮೇಶ್ ಕುಟ್ಟಪ್ಪ ಭಾಜನರಾಗಿದ್ದಾರೆ.
ಪಂದ್ಯಂಡ ಬೆಳ್ಯಪ್ಪ ಸ್ಮರಣಾರ್ಥ ಅತ್ಯುತ್ತಮ ಗ್ರಾಮೀಣ ವರದಿಯ ಪ್ರಶಸ್ತಿಗೆ ಪತ್ರಕರ್ತ ಎ.ಎನ್.ವಾಸು, ಸಂಘದ ಮಾಜಿ ಅಧ್ಯಕ್ಷ ಕೆ.ಕೆ.ಶಶಿಧರ್ ಸ್ಮರಣಾರ್ಥ ಕ್ರೀಡಾ ವರದಿ ಪ್ರಶಸ್ತಿಗೆ ಕಾಯಪಂಡ ಶಶಿ ಸೋಮಯ್ಯ, ಸಂಘದ ಮಾಜಿ ಉಪಾಧ್ಯಕ್ಷ ಸಿ.ಎನ್.ಸುನಿಲ್ ಕುಮಾರ್ ಸ್ಮರಣಾರ್ಥ ವೀಡಿಯೋಗ್ರಫಿ ಪ್ರಶಸ್ತಿಗೆ ಕೆ.ಬಿ.ದಿವಾಕರ್, ನಿವೃತ್ತ ವಾರ್ತಾಧಿಕಾರಿ ಪಳೆಯಂಡ ಪೊನ್ನಪ್ಪ ಸ್ಥಾಪಿಸಿದ ಅತ್ಯುತ್ತಮ ತನಿಖಾ ವರದಿ ಪ್ರಶಸ್ತಿಗೆ ಎಂ.ಎನ್.ಚಂದ್ರಮೋಹನ್, ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿದ್ದ ಮಂಡಿಬೆಲೆ ರಾಜಣ್ಣ ತಂದೆ ಮಂಡಿಬೆಲೆ ಶಾಮಣ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅರಣ್ಯ ವನ್ಯಜೀವಿ ಪ್ರಶಸ್ತಿಗೆ ಜಗದೀಶ್ ಜೋಡುಬೀಟಿ, ಮರಗೋಡು ಹಾಲು ಉತ್ಪಾದಕರ ಸಹಕಾರ ಸಂಘದ ಸ್ಥಾಪಕಾಧ್ಯಕ್ಷ ಮಂದ್ರೀರ ಮೋಹನ್ದಾಸ್ ಅವರು ಪ್ರಗತಿಪರ ಹಾಲು ಉತ್ಪಾದಕರಾಗಿದ್ದ ಉಳುವಾರನ ಶೇಷಗಿರಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಹೈನುಗಾರಿಕೆ ಪ್ರಶಸ್ತಿಗೆ ಅಣ್ಣೀರ ಹರೀಶ್ ಮಾದಪ್ಪ, ಸ್ವಸ್ಥ ಸಂಸ್ಥೆಯ ಮುಖ್ಯಸ್ಥೆ ಕಾಕಮಾಡ ಗಂಗಾ ಚಂಗಪ್ಪ ಅವರು ಮಾವ ಕಾಕಮಾಡ ನಾಣಯ್ಯ ಹೆಸರಿನಲ್ಲಿ ಸ್ಥಾಪಿಸಿರುವ ಶೈಕ್ಷಣಿಕ ವರದಿ ಪ್ರಶಸ್ತಿಗೆ ಎಚ್.ಕೆ.ಜಗದೀಶ್, ಬೆಳೆಗಾರ ಅಜ್ಜಮಾಡ ಕಟ್ಟಿ ಮಂದಯ್ಯ ತಂದೆ ತಾಯಿ ಅಜ್ಜಮಾಡ ಸುಬ್ಬಯ್ಯ, ಬೊಳ್ಳಮ್ಮ ಹೆಸರಿನಲ್ಲಿ ಸ್ಥಾಪಿಸಿರುವ ತೋಟಗಾರಿಕಾ ಪ್ರಶಸ್ತಿಗೆ ಸುನಿಲ್ ಪೊನ್ನೇಟಿ ಭಾಜನರಾಗಿದ್ದಾರೆ.
ಕೋವರ್ ಕೊಲ್ಲಿ ಇಂದ್ರೇಶ್ ತಂದೆ ಚಂದ್ರಶೇಖರ್ ಅವರ ಹೆಸರಿನಲ್ಲಿ ಸ್ಥಾಪಿಸಿದ ಮಾನವೀಯ ವರದಿ ಪ್ರಶಸ್ತಿಗೆ ಹಿರಿಕರ ರವಿ, ಮಂಡಿಬೆಲೆ ರಾಜಣ್ಣ ತಾಯಿ ದ್ಯಾವಮ್ಮ ಶ್ಯಾಮಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಅರಣ್ಯ ವನ್ಯಜೀವಿ ದೃಶ್ಯಮಾಧ್ಯಮ ವರದಿ ಪ್ರಶಸ್ತಿಗೆ ವಿಷ್ಮಾ ಪೆಮ್ಮಯ್ಯ, ತೇನನ ರಾಜೇಶ್ ತಂದೆ ತೇನನ ಸೋಮಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಸೇನೆಗೆ ಸಂಬಂಧಿಸಿದ ದೃಶ್ಯ ಮಾಧ್ಯಮ ವರದಿ ಪ್ರಶಸ್ತಿಗೆ ವಿಶ್ವ ಕುಂಬೂರು, ವಕೀಲರಾದ ಪಿ.ಕೃಷ್ಣಮೂರ್ತಿ ತಂದೆ ಟಿ.ಕೆ.ಸುಬ್ರಹ್ಮಣ್ಯ ಭಟ್ ಪಂಜಿತ್ತಡ್ಕ ಸ್ಮರಣಾರ್ಥ ಸ್ಥಾಪಿಸಿರುವ ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾಗುವ ಮಾನವೀಯ ವರದಿಗೆ ಮಲ್ಲಿಕಾರ್ಜುನ, ಆಪ್ತ ಸಮಾಲೋಚಕಿ ತೇಲಪಂಡ ಆರತಿ ಸೋಮಯ್ಯ ಅಜ್ಜ ಕೋಟೆರ ಮುತ್ತಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಆರೋಗ್ಯ ವರದಿಗೆ ಕೃಷ್ಣ ಸಿದ್ದಾಪುರ, ಸಂಘದ ಸದಸ್ಯರಾಗಿದ್ದ ಎಸ್.ಎ.ಮುರುಳೀಧರ್ ತಾಯಿ ಪಾರ್ವತ್ತಮ್ಮ ಅಪ್ಪಸ್ವಾಮಿ ಹೆಸರಿನಲ್ಲಿ ಸ್ಥಾಪಿಸಿರುವ ಕೃಷಿ ವರದಿ ಪ್ರಶಸ್ತಿಗೆ ಉದಿಯಂಡ ಜಯಂತಿ ಮಂದಣ್ಣ, ಶಕ್ತಿ ಸಲಹಾ ಸಂಪಾದಕ ಬಿ.ಜಿ.ಅನಂತಶಯನ ಹೋಂಸ್ಟೇ ಆಲ್ಫೆನ್ ಗ್ಲೋ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಸುದ್ದಿ ಛಾಯಾ ಚಿತ್ರ ಪ್ರಶಸ್ತಿಯನ್ನು ರಂಗಸ್ವಾಮಿ ಅವರು ಪಡೆದುಕೊಂಡಿದ್ದಾರೆ.
ಫೋಟೋ 1 ಎಂಡಿಕೆ 03 ; ಅಜ್ಜಮಾಡ ರಮೇಶ್ ಕುಟ್ಟಪ್ಪ