ಶಿವಮೊಗ್ಗ : ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಶಿವಮಗೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಸಂಭ್ರಮಾಚರಣೆ ನಡೆಸುತ್ತಿದ್ದಾಗ ಮುಸ್ಲಿಂ ಮಹಿಳೆ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದಳು. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೆಎಸ್ ಈಶ್ವರಪ್ಪ , ಮುಸ್ಲಿಂ ಮಹಿಳೆ ಹುಚ್ಚಿಯಾಗಿದ್ದರೆ ಅಲ್ಲಾಹು ಅಕ್ಬರ್ ಘೋಷಣೆ ಹೇಗೆ ಕೂಗಿದಳು? ಮೋದಿಗೇ ಯಾಕೆ ಧಿಕ್ಕಾರ ಕೂಗಿದಳು ಎಂದು ಪ್ರಶ್ನಿಸಿದರು.ಯಾವನೋ ಆಕ್ರಮಣಕಾರಿ ಬಾಬರ್ ದೇವಸ್ಥಾನ ಕೆಡವಿ ಮಸೀದಿ ಕಟ್ಟಿದ್ದ. ಆದರೆ ಈಗ 500 ವರ್ಷಗಳ ದೇಶದ ಹಿಂದೂಗಳ ಕನಸು ನನಸಾಗಿದೆ. ಶಿವಪ್ಪನಾಯಕ ಪ್ರತಿಮೆ ಬಳಿ ಸಂಭ್ರಮ ಆಚರಿಸುವ ವೇಳೆ ಬುರ್ಖಾ ಹಾಕಿಕೊಂಡು ಬಂದು ಅಲ್ಲಾಹು ಅಕ್ಬರ್ ಅಂತಾ ಕೂಗಿದ್ದಲ್ಲದೆ, ಪ್ರಧಾನಿ ನರೇಂದ್ರ ಮೋದಿಗೆ ಅಪಮಾನ ಮಾಡಿದ್ದಾಳೆ. ಈ ಬಗ್ಗೆ ಮಾಧ್ಯಮದಲ್ಲಿ ನೋಡಿ ಎಸ್ಪಿ ಜೊತೆ ಮಾತನಾಡಿದ್ದೇನೆ ಎಂದರು. ಆ ಮಹಿಳೆ ಹುಚ್ಚಿ ಅಂತಾ ಎಸ್ಪಿ ಹೇಳಿದ್ದಾರೆ. ನೀವು ಹುಚ್ಚಿ ಅಂತಾ ಹೇಗೆ ನಿರ್ಧಾರ ಮಾಡುತ್ತೀರಾ ಎಂದು ಎಸ್ಪಿ ಅವರನ್ನು ಕೇಳಿದ್ದೇನೆ. ಅಲ್ಲದೆ, ಆಕೆ ವಿರುದ್ಧ ಎಫ್ಐಆರ್ ದಾಖಲಿಸಿ, ಬಂಧಿಸುವಂತೆ ಹೇಳಿದ್ದೇನೆ. ನಿಸ್ಪಕ್ಷಪಾತವಾಗಿ ತನಿಖೆ ಮಾಡಬೇಕು ಎಂದು ಹೇಳಿದ್ದಾಗಿ ತಿಳಿಸಿದರು.