ಶಿವಮೊಗ್ಗ: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್ ಅಸ್ತು ಎಂದ ವಿಚಾರವಾಗಿ ಮಾತನಾಡಿದ ಮಾಜಿ ಸಚಿವ ಕೆಎಸ್ ಈಶ್ವರಪ್ಪ, ಈ ಕೇಸ್ನಲ್ಲಿ ಡಿಕೆಶಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಇದ್ದಾರೆ. ಅಕ್ರಮ ಸಂಪಾದನೆ ಪ್ರಕರಣ ಬಗ್ಗೆ ಸಿಬಿಐ ತನಿಖೆ ಮಾಡುತ್ತಿದೆ. ಬರೆದಿಟ್ಟುಕೊಳ್ಳಿ ಮತ್ತೆ ಡಿ.ಕೆ.ಶಿವಕುಮಾರ್ ಜೈಲಿಗೆ ಹೋಗುತ್ತಾರೆ ಎಂದರು. ಡಿ.ಕೆ.ಶಿವಕುಮಾರ್ ಭಂಡತನದ ರಾಜಕಾರಣ ಮಾಡುತ್ತಿದ್ದಾರೆ. ಮೊನ್ನೆ ಬೆಂಗಳೂರಿನಲ್ಲಿ 100 ಕೋಟಿ ಅಕ್ರಮ ಹಣ ಪತ್ತೆಯಾಗಿದೆ. ಡಿಕೆಶಿ ಉತ್ತರದಲ್ಲೂ ಗೂಂಡಾಗಿರಿ ಕಂಡು ಬರುತ್ತದೆ. ತನಿಖೆ ಮಾಡಿ ಅಂತಾ ಬಿಜೆಪಿ ಕೇಳುವುದು ತಪ್ಪಾ? ನೀವು ಕಳ್ಳರು ಅಂತಾ ನಾವು ಇನ್ನೂ ನೇರವಾಗಿ ಹೇಳಿಲ್ಲ ಎಂದರು.