ಮೈಸೂರು : ಯಾರೋ ಇಬ್ಬರು ಮೂವರು ಹೋದ್ರೆ ತಲೆ ಕೆಡಿಸಿಕೊಳ್ಳಲ್ಲ. ನಮ್ಮ ಪಕ್ಷಕ್ಕೆ ಸಾವಿರಾರು ಜನರು ಬರುತ್ತಾರೆ ಎಂದು ಮೈಸೂರಿನಲ್ಲಿ ಮಾಜಿ ಶಾಸಕ ಎಲ್ ನಾಗೇಂದ್ರ ಹೇಳಿದ್ದಾರೆ. ಮುಡಾ ಮಾಜಿ ಅಧ್ಯಕ್ಷ ಎಚ್.ವಿ ರಾಜೀವ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವ ವಿಚಾರ ಮಾಜಿ ಶಾಸಕ ಎಲ್.ನಾಗೇಂದ್ರ ಪ್ರತಿಕ್ರಿಯೆ ನೀಡಿದ ಅವರು, ಎಚ್.ವಿ ರಾಜೀವ್ ಅವರು ಪಕ್ಷ ತೊರೆಯುವುದರಿಂದ ನಮ್ಮ ಪಕ್ಷಕ್ಕೆ ಯಾವುದೇ ತೊಂದರೆ ಆಗುವುದಿಲ್ಲ. ಈಗಾಗಲೇ ಅವರು ರಾಜಿನಾಮೆ ನೀಡಿದ್ದಾರೆ. ಅವರ ಮನವೊಲಿಸುವ ಪ್ರಯತ್ನ ಮಾಡಲ್ಲ. ಈಗಾಗಲೇ ಕಳೆದ ವಿಧಾನಸಭಾ ಚುನಾವಣೆಯಲ್ಲೇ ಅವರು ಪಕ್ಷದ ವಿರುದ್ಧವಾಗಿ ಕೆಲಸ ಮಾಡಿದ್ದಾರೆ. ಯಾರೋ ಇಬ್ಬರು ಮೂವರು ಹೋದರೆ ನಮ್ಮ ಪಕ್ಷಕ್ಕೆ ಸಾವಿರಾರು ಜನರು ಬರುತ್ತಾರೆ. ಇದಕ್ಕೆ ಹೆಚ್ಚು ತಲೆ ಕೆಡಿಸಿಕೊಳ್ಳವುದಿಲ್ಲ. ಚುನಾವಣಾ ಸಂದರ್ಭದಲ್ಲಿ ಪಕ್ಷಾಂತರ ಪರ್ವ ಸಹಜ. ಆದರೆ ಇದರಿಂದ ಪಕ್ಷಕ್ಕೆ ಯಾವುದೇ ಡ್ಯಾಮೇಜ್ ಆಗಲ್ಲ ಎಂದು ಹೇಳಿದರು.