ಪ್ರತಿನಿಧಿ ವರದಿ ಸರಗೂರು
ಶ್ರೀ ಆದಿಚುಂಚನಗಿರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ತಾಲೂಕಿನ ಹೆಗ್ಗನೂರು ಗ್ರಾಮದಲ್ಲಿ ಕಾನೂನು ಅರಿವು ವಿಷಯಕ್ಕೆ ಸಂಬಂಧಿಸಿದಂತೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಸಲಾಯಿತು.
ನ್ಯಾಯಾಧೀಶರಾದ ಸಂದೇಶ್ ಪ್ರಭು ಮಾತನಾಡಿ, ಬಾಲ್ಯ ವಿವಾಹ ಮಾಡುವುದು ಶಿಕ್ಷಾರ್ಹ ಅಪರಾಧ.ಬಾ ಲ್ಯ ವಿವಾಹವು ಮಕ್ಕಳ ಮೇಲೆ ಬೀರುವ ಪರಿಣಾಮದ ಬಗ್ಗೆ ತಿಳಿಸಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶ ಕೆ.ಜೆ.ಸತೀಶ್ ಮಾತನಾಡಿ, ಸಮಾಜದಲ್ಲಿ ಅನಿಷ್ಟ ಪದ್ಧತಿಯಾದ ಹೆಣ್ಣು ಭ್ರೂಣ ಹತ್ಯೆಗಳು ನಿರಂತರವಾಗಿ ನಡೆಯುತ್ತಿದೆ. ಅದು ಕಾನೂನು ಬಾಹಿರ ಚಟುವಟಿಕೆ. ಹೆಣ್ಣು ಭ್ರೂಣ ಹತ್ಯೆ ಮಾಡಿದವರಿಗೆ ಕಾನೂನಿನ ಮೂಲಕ ಉಗ್ರವಾದ ಶಿಕ್ಷೆ ನೀಡುವುದಾಗಿ ತಿಳಿಸಿದರು.
ಹೆಚ್ಚುವರಿ ನ್ಯಾಯಾಧೀಶ ಸುರೇಶ್ , ಪ್ರಾಂಶುಪಾಲರಾದ ಡಾ.ಜೆ.ಎನ್.ವೆಂಕಟೇಶ್ , ಶಿಬಿರದ ಅಧಿಕಾರಿಗಳಾದ ರಾಮಚಂದ್ರ, ಸಿದ್ದೇಗೌಡ, ಸಹ ಶಿಬಿರಾಧಿಕಾರಿ ಗಳಾದ ಚೆನ್ನಕೇಶವ ನಾಯಕ, ರವೀಶ್,ಮಹೇಶ್, ಮಹದೇವ, ಪ್ರೀತಿ, ಚಿತ್ರ, ಚಂದನ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಗ್ರಾಪಂ ಅಧ್ಯಕ್ಷ ಸುಧೀರ್ ಅಧ್ಯಕ್ಷತೆ ವಹಿಸಿದ್ದರು.