ಮಡಿಕೇರಿಯಲ್ಲಿ ಗಾಳಿ ಸಹಿತ ಮಳೆಗೆ ಕೊಡಗು ಜಿಲ್ಲೆ ನಲುಗಿ ಹೋಗಿದ್ದು, ಅಪಾರ ನಷ್ಟ ಅನುಭವಿಸಿದೆ. ರಾಜ್ಯ ಸರ್ಕಾರ ತಕ್ಷಣ ಮಳೆಹಾನಿ ಪರಿಹಾರವಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಬಿಜೆಪಿ ವಿರಾಜಪೇಟೆ ಮಂಡಲ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ.
ಬಿಜೆಪಿ ಸರ್ಕಾರವು ಮನೆ ಸಂಪೂರ್ಣವಾಗಿ ಹಾನಿಯಾಗಿದರೆ 5 ಲಕ್ಷ ರೂ. ಪರಿಹಾರ ನೀಡುತ್ತಿತ್ತು. ಕಾಂಗ್ರೆಸ್ ಸರ್ಕಾರ ಸಂಪೂರ್ಣ ಮನೆಹಾನಿಯಾದರೆ 1.20 ಲಕ್ಷ ರೂ. ನೀಡುವುದಾಗಿ ತಿಳಿಸಿದೆ. ಇದಕ್ಕೆ ನಮ್ಮ ವಿರೋಧವಿದ್ದು, ಶೇ.70ಕ್ಕಿಂತ ಹೆಚ್ಚು ಹಾನಿಗೀಡಾದ ಮನೆಗಳಿಗೆ 5 ಲಕ್ಷ ರೂ., ಶೇ.40ಕ್ಕಿಂತ ಹೆಚ್ಚು ಹಾನಿಗೀಡಾದ ಮನೆಗಳಿಗೆ 3 ಲಕ್ಷ ರೂ. ನೀಡಬೇಕು. ವಿಶೇಷ ಅಧಿಕಾರಿಗಳ ತಂಡವನ್ನು ರಚಿಸಿ ಮನೆಹಾನಿಯ ಸಮಗ್ರ ವರದಿಯನ್ನು ತಯಾರಿಸಬೇಕು. ಮನೆ ಕಳೆದುಕೊಂಡವರಿಗೆ ತುರ್ತಾಗಿ ಮೊದಲ ಹಂತದಲ್ಲಿ 50 ಸಾವಿರ ರೂ. ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.