ಮಂಡ್ಯ: ಜಿಲ್ಲೆಯ ಸಮಗ್ರ ಅಭಿವೃದ್ದಿಗಾಗಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಗೆಲ್ಲಿಸಿಸೋಣ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ನಾಯಕ ರಾಮಚಂದ್ರ ಹೇಳಿದರು.
ನೆಹರುನಗರದ ಶ್ರೀರಾಮಮಂದಿರ ದೇವಾಲಯದ ಬಳಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪರ ಮನೆ ಮನೆಗೆ ತೆರಳಿ ಮತಯಾಚನೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಲೋಕಸಭೆಯಲ್ಲಿ ರೈತಪರ ಧ್ವನಿಯೆತ್ತಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿರುವ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಗೆಲ್ಲಿಸೋಣ, ೨ ಲಕ್ಷಕ್ಕಿಂತ ಹೆಚ್ಚು ಬಹುಮತದೊಂದಿಗೆ ಆಯ್ಕೆ ಮಾಡಿ ಕಳಿಸಿ, ಕೇಂದ್ರದ ಮಂತ್ರಿಯಾಗಲು ಮತದಾನದ ಮೂಲಕ ಶಕ್ತಿತುಂಬೋಣ ಎಂದು ಮನವಿ ಮಾಡಿದರು.
ಜಿ.ಪಂ. ಮಾಜಿ ಸದಸ್ಯ ವಿಜಯಾನಂದ ಮಾತನಾಡಿ, ಇಂದು ಬಿಜೆಪಿ ಮತ್ತು ಜೆಡಿಎಸ್ನ ಪದಾಧಿಕಾರಗಳು, ಕಾರ್ಯಕರ್ಯರು ಒಗ್ಗೂಡಿ, ನೆಹರು ನಗರ, ಅಶೋಕನಗರ, ಹೊಸಹಳ್ಳಿ, ರಾಮನಹಳ್ಳಿ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪರ ಮತಯಾಚನೆ ಮಾಡಿ, ಗೆಲ್ಲಿಸಿಕೊಡಲು ಮನವಿ ಮಾಡುತ್ತಿದ್ದೇವೆ ಎಂದರು.
ಕುಮಾರಣ್ಣ ಗೆದ್ದರೆ ಕೇಂದ್ರದಲ್ಲಿ ಮಂತ್ರಿಯಾಗುತ್ತಾರೆ, ಹೆಚ್ಚಿನ ಅನುದಾನ ಜಿಲ್ಲೆಗೆ ಬರುತ್ತದೆ, ಅಭಿವೃದ್ದಿ ಕಾಣಲು ಸಾಧ್ಯವಾಗುತ್ತದೆ, ಮತದಾರರು ಆಲೋಚನೆ ಮಾಡಿ, ಅಭಿವೃದ್ದಿಗಾಗಿ ಗೆಲ್ಲಿಸಿ ಎಂದರು.
ಜೆಡಿಎಸ್ ಜಿಲ್ಲಾಧ್ಯಕ್ಷ, ಮಂಡ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ನಾಯಕ ಅಶೋಕ್ಕುಮಾರ್, ವಿವೇಕ್, ವಸಂತಕುಮಾರ್, ಸಿದ್ದರಾಮೇಗೌಡ, ತಿಮ್ಮೇಗೌಡ ಮತ್ತಿತರರಿದ್ದರು.