ನಾಗಮಂಗಲ: ಅಖಿಲ ಭಾರತ ವೀರಶೈವ ಲಿಂಗಾಯಿತ ಸಮಾಜದ ಚುನಾವಣೆ ಜು.೨೧ ರಂದು ಭಾನುವಾರ ಮಂಡ್ಯದಲ್ಲಿ ನಡೆಯಲಿದ್ದು, ಈ ಚುನಾವಣೆಯಲ್ಲಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಪಾಂಡವಪುರ ತಾಲೂಕಿನ ಅಮೃತಿ ಗ್ರಾಮದ ಡಿ.ಶಂಕರ್ ಅವರನ್ನು ಬೆಂಬಲಿಸುವಂತೆ ನಾಗಮಂಗಲ ತಾಲೂಕು ಅಖಿಲ ಭಾರತ ವೀರಶೈವ ಲಿಂಗಾಯಿತ ಸಮಾಜದ ಅಧ್ಯಕ್ಷ ಕಲ್ಲಿನಾಥಪುರ ಗ್ರಾಮದ ಪರಮೇಶ್ ಮನವಿ ಮಾಡಿದರು.
ಪಟ್ಟಣದ ಪತ್ರಕರ್ತರ ಸಂಘ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ಚುನಾವಣೆ ನಡೆಯುತ್ತಿದ್ದು, ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅಮೃತಿ ಗ್ರಾಮದ ಡಿ.ಪರಮೇಶ್ ನೇತೃತ್ವದ ತಂಡ ಸ್ಪರ್ಧೆ ಮಾಡಿದ್ದು, ಲಿಂಗಾಯಿತ ಸಮಾಜದ ಮುಖಂಡರು ಹಾಗೂ ಮತದಾರರು ಸಮಾಜದ ಕೆಲಸದಲ್ಲಿ ಅನುಭವವಿರುವ, ಯುವ ಉತ್ಸಾಹಿ ಹಾಗೂ ಸದಾ ಸಮಾಜದ ಪರ ಒಳ್ಳೆಯ ಚಿಂತನೆಗಳುಳ್ಳ ವ್ಯಕ್ತಿ ಡಿ.ಪರಮೇಶ್ ಆಗಿದ್ದು, ತಾಲೂಕಿನ ಹಾಗೂ ಜಿಲ್ಲೆಯ ಮತದಾರರು ಬೆಂಬಲಿಸುವಂತೆ ಅವರು ಸಮಾಜ ಬಾಂಧವರಲ್ಲಿ ಮನವಿ ಮಾಡಿದರು.
ನಾಗಮಂಗಲ ತಾಲೂಕಿನಿಂದ ಮಂಡ್ಯ ಜಿಲ್ಲೆಯ ನಿರ್ದೇಶಕ ಸ್ಥಾನಕ್ಕೆ ಬ್ರಹ್ಮದೇವರಹಳ್ಳಿ ಮಹಾದೇವ್ ಸ್ಪರ್ಧೇ ಮಾಡಿದ್ದು, ಇವರಿಗೂ ತಾಲೂಕಿನ ಹಾಗೂ ಜಿಲ್ಲೆಯ ಸಮಾಜ ಬಾಂಧವರು ಬೆಂಬಲಿಸುವ ಮೂಲಕ ಇವರನ್ನು ಮಂಡ್ಯ ಜಿಲ್ಲೆಯ ಅಖಿಲ ಭಾರತ ವೀರಶೈವ ಲಿಂಗಾಯಿತ ಸಮಾಜದ ನಿರ್ದೇಶಕ ಸ್ಥಾನಕ್ಕೆ ಚುನಾಯಿತಗೊಳಿಸಬೇಕು ಎಂದು ಮನವಿ ಮಾಡಿದರು.
ಮಹಾದೇವ್ ತಾಲೂಕಿನಿಂದ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿರುವ ಏಕೈಕ ವ್ಯಕ್ತಿಯಾಗಿದ್ದು, ಸೃಜನಶೀಲ ಮತ್ತು ಎಲ್ಲಾ ಸಮಾಜದ ಮುಖಂಡರೊAದಿಗೆ ಉತ್ತಮ ಬಾಂಧವ್ಯವಿಟ್ಟುಕೊಂಡಿರುವ ವ್ಯಕ್ತಿಯಾಗಿದ್ದು, ಈಗಾಗಲೇ ಹಲವು ಸಮಾಜ ಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆದ್ದರಿಂದ ಇಂತಹ ವ್ಯಕ್ತಿಗೆ ಮತ ನೀಡಿ ಸಮಾಜ ಕಟ್ಟುವ ಕಾಯಕಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಪರಮೇಶ್ ಮನವಿ ಮಾಡಿದರು.
ಉಪಾಧ್ಯಕ್ಷ ಗೀತಾ ಗುರುಪ್ರಸಾದ್, ವಕೀಲ ಜೈಪ್ರಕಾಶ್, ಮಹೇಂದ್ರ ಗೋಷ್ಠಿಯಲ್ಲಿ ಹಾಜರಿದ್ದರು.