ಚಿಕ್ಕಮಗಳೂರು: ಜಿಲ್ಲೆಯ ಲೋಕಾಯುಕ್ತ ಕಚೇರಿ ವತಿಯಿಂದ ಜೂ.12 ರಂದು ಬೆಳಗ್ಗೆ 11 ಗಂಟೆಗೆ ಕೊಪ್ಪ ತಾಲೂಕು ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಈ ಸಭೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಕಚೇರಿ, ಚಿಕ್ಕಮಗಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
———————-
ವಿಶೇಷ ಸಂಪನ್ಮೂಲ ಶಿಕ್ಷಕರ ತಾತ್ಕಾಲಿಕ ಹುದ್ದೆಗೆ ಅರ್ಜಿ
ಚಿಕ್ಕಮಗಳೂರು: ಸಮಗ್ರ ಶಿಕ್ಷಣ ಕರ್ನಾಟಕ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲೆಯ ಸಮನ್ವಯ ಶಿಕ್ಷಣ ಕಾರ್ಯಕ್ರಮದ ಅಡಿಯಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳ ಚಟುವಟಿಕೆಗಳ ಅನುಷ್ಠಾನಕ್ಕಾಗಿ ಜಿಲ್ಲೆಯ ಬ್ಲಾಕ್ಗಳಲ್ಲಿ ಖಾಲಿ ಇರುವ ಬಿಐಇಆರ್.ಟಿ ಪ್ರಾಥಮಿಕ ಮತ್ತು ಪ್ರೌಢ ಹುದ್ದೆಗಳಿಗೆ ನೇರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡಿಕೊಳ್ಳಲು ಡಿ.ಇಡಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಜೂ.17 ರೊಳಗೆ ಉಪನಿರ್ದೇಶಕರು(ಆಡಳಿತ) ಹಾಗೂ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ಸಮಗ್ರ ಶಿಕ್ಷಣ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ.9448999334, 9448999391, 9480886931ನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಗ್ರ ಶಿಕ್ಷಣ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು (ಆಡಳಿತ) ಹಾಗೂ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
—————————–
ರಂಗ ಶಿಕ್ಷಣ ಡಿಪ್ಲೋಮೊಗೆ ಅರ್ಜಿ ಆಹ್ವಾನ
ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಮೈಸೂರು ರಂಗಾಯಣದ ಭಾರತೀಯ ರಂಗಶಿಕ್ಷಣ ಶಾಲೆಯು ಡಿಪ್ಲೋಮೋ ಕೋರ್ಸ್ ಗಳನ್ನು 2024-25ನೇ ಸಾಲಿನ ರಂಗ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ವೆಬ್ ಸೈಟ್ hಣಣಠಿ://ಡಿಚಿಟಿgಚಿಥಿಚಿಟಿಚಿmಥಿsoಡಿe.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಜೂ.20 ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2512639, 9148827720 ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೈಸೂರಿನ ರಂಗಾಯಣ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
————————-
ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಿಕ್ಕಮಗಳೂರು: ಡಿಎಸಿಜಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ವತಿಯಿಂದ 2024-25ನೇ ಸಾಲಿನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಡಿಪ್ಲೊಮಾ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಡಿಎಸಿಜಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸಿಬ್ಬಂದಿಯ ಮೊ.ಸಂ. 9886489678, 9901229382 ಸಂಪರ್ಕಿಸಬಹುದೆಂದು ಡಿಎಸಿಜಿ ಸರ್ಕಾರಿ ಪಾಲಿಟೆಕ್ನಿಕ್ನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
————————
ಹೆಸರು ನೋಂದಣಿ
ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಅಲಿಂಕೋ ಸಂಸ್ಥೆಯಿಂದ ಅಡಿಪ್ ಯೋಜನೆ ಅಡಿ ವಿಕಲಚೇತನರಿಗೆ ಹಾಗೂ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಲು ಜಿಲ್ಲೆಯ ವಿಕಲಚೇತನರ ಹಾಗೂ ಹಿರಿಯ ನಾಗರಿಕರು ಮೌಲ್ಯಮಾಪನ ಶಿಬಿರಕ್ಕೆ ಹಾಜರಾಗುವುದಕ್ಕಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣ ಅಧಿಕಾರಿಗಳ ಕಚೇರಿ ದೂ.ಸಂ. 08262-228171, ತಾಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರುಗಳ ಮೊಬೈಲ್ ಸಂಖ್ಯೆ ಚಿಕ್ಕಮಗಳೂರು ಎಂಆರ್ ಡಬ್ಲ್ಯೂ ಮೋಹನ್ ಗೌಡ ಕೆ ಎಸ್ 9148446757, ಕಡೂರು ಎಂ.ಆರ್ ಡಬ್ಲ್ಯೂ ಶಾನ್ ವಾಚ್ 9036946273, ಮೂಡಿಗೆರೆ ಎಂ.ಆರ್ ಡಬ್ಲ್ಯೂ ಚಂಪಾ ಕೆ.ಬಿ 9482740466, ಕೊಪ್ಪ ಎಮ್ ಆರ್ ಡಬ್ಲ್ಯೂ ಮೋಹನ್ ಡಿ.ಆರ್. 9448223239, ತರೀಕೆರೆ ಎಂಆರ್ ಡಬ್ಲ್ಯೂ ಅಕ್ರಂ ಬಾಷ 9632503867, ಶೃಂಗೇರಿ ಎಂ.ಆರ್ ಡಬ್ಲ್ಯೂ ಸಾಮ್ರಾಟ್ ಜಿಎಲ್ 7975132606, ನರಸಿಂಹರಾಜಪುರ ಎಂ.ಆರ್ ಡಬ್ಲ್ಯೂ ಜಾಮಿನ್ ಫ್ರಾನ್ಸಿಸ್ 7899778903, ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣ ಅಧಿಕಾರಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
———————————-
ಮೆಸ್ಕಾಂ ಜನ ಸಂಪರ್ಕ
ಚಿಕ್ಕಮಗಳೂರು: ಮೆಸ್ಕಾಂ ಬಾಳೆಹೊನ್ನೂರು ಉಪವಿಭಾಗ ಕಛೇರಿಯಲ್ಲಿ ಜೂ.13 ರಂದು ಬೆಳಗ್ಗೆ 10.30 ರಿಂದ 12 ಗಂಟೆಯ ವರೆಗೆ ಜನ ಸಂಪರ್ಕ ಸಭೆ ಏರ್ಪಡಿಸಲಾಗಿದೆ. ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಗ್ರಾಹಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂನ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
———————-
ನೇರ ಸಂದರ್ಶನ
ಚಿಕ್ಕಮಗಳೂರು: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಛೇರಿಯಲ್ಲಿ ಐಸಿಐಸಿ ಬ್ಯಾಂಕ್, ಖಾಲಿ ಇರುವ ಖeಟಚಿಣioಟಿshiಠಿ ಒಚಿಟಿಚಿgeಡಿ ಹುದ್ದೆಗಳಿಗೆ ನೇರ ಸಂದರ್ಶನವನ್ನು ಜೂ.11 ರಂದು ಬೆಳಗ್ಗೆ 10.30ಗಂಟೆಗೆ ಏರ್ಪಡಿಸಲಾಗಿದೆ.
18 ರಿಂದ 25 ವರ್ಷದ ಯಾವುದೇ ಪದವಿ ಅರ್ಹತೆ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದು ಹಾಗೂ ಉಚಿತ ಪ್ರವೇಶವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದೂ.ಸಂ:9945198500, 08262-295538ಗೆ ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.