ಪ್ರತಿನಿಧಿ ವರದಿ ಸೋಮವಾರಪೇಟೆ
ತಾಲೂಕಿನ ವಿಶ್ವ ಮಾನವ ಕುವೆಂಪು ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಲಾಂಚನ್ ಚೆಸ್ ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಗೋಣಿಕೊಪ್ಪಲುವಿನ-ಆರವತ್ತೂಕ್ಲುವಿನಲ್ಲಿ ನೆಡದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಇವರು ಆಯ್ಕೆಯಾಗಿದ್ದು, ಅಕ್ಟೊಂಬರ್ ತಿಂಗಳಲ್ಲಿ ಹಾವೇರಿಯಲ್ಲಿ ನೆಡೆಯುವ ರಾಜ್ಯ ಮಟ್ಟದ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲೆಯಿಂದ ಪ್ರತಿನಿಧಿಸುತ್ತಿದ್ದಾರೆ. ಇವರು ಸಮೀಪದ ಕೂತಿ ಗ್ರಾಮದ ವಿನೋದ್ ಕುಮಾರ್ ಹಾಗೂ ಚಂದ್ರಿಕಾ ದಂಪತಿಗಳ ಪುತ್ರ.