ಪ್ರತಿನಿಧಿ ವರದಿ ಚಾಮರಾಜನಗರ
ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಗಡಿ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇ ಶ್ವರಬೆಟ್ಟದ ಮಾದಪ್ಪನ ಸನ್ನಿಧಿಯ ಹುಂಡಿಯಲ್ಲಿ ಸಂಗ್ರಹವಾದ ಹಣ ಎಣಿಕೆ ನಡೆದಿದ್ದು, ದಾಖಲೆಯ 1.64ಕೋಟಿ ರೂ.ಸಂಗ್ರಹವಾಗಿದೆ.
ಶ್ರೀ ಕ್ಷೇತ್ರ ಮಲೆ ಮಹದೇಶ್ವರಬೆಟ್ಟದ ಬಸ್ ನಿಲ್ದಾ ಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂ ರು ಬೃಹನ್ಮಠಾಧ್ಯಕ್ಷ ಶಾಂತಮಲ್ಲಿಕಾರ್ಜುನಸ್ವಾ ಮಿ ಹಾಗೂ ಮಲೆ ಮಹದೇಶ್ವರಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮರಾ ಕಣ್ಣಾವಲು ಹಾಗೂ ಪೊ ಲೀಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯಪ್ರಾ ರಂಭ ಮಾಡಲಾಯಿತು.
ಕೇವಲ 28ದಿನಗಳಲ್ಲಿ .1,64,22,932 ರೂ. ಸಂಗ್ರಹವಾಗಿದ್ದು, ಭಕ್ತಾದಿಗಳು ಮಾದಪ್ಪನಿಗೆ ಹಣದ ರೂಪದಲ್ಲಿ ಭಕ್ತಿಯ ಹೊಳೆಯನ್ನೇ ಹರಿಸಿದ್ದಾರೆ. ಇಷ್ಟೇ ಅಲ್ಲದೇ 21 ಗ್ರಾಂ ಚಿನ್ನ ಮತ್ತು 2ಕೆಜಿ 100 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆಯ ರೂಪದಲ್ಲಿ ದೇವರಿಗೆ ಅರ್ಪಿಸಿದ್ದಾರೆ.
ವಿಶೇಷದಿನಗಳು, ಅಮಾವಾಸ್ಯೆ ಹಾಗೂ ಹುಣ್ಣಿಮೆಯ ದಿನಗಳು, ಇತರೆ ರಜೆದಿನಗಳು ಹಾಗೂ ದೀಪದ ಒಡ್ಡುವಿನಲ್ಲಿ ನಿರ್ಮಾಣಗೊಂಡಿರುವ ಮಾದಪ್ಪನ ಬೃಹತ್ ಪ್ರತಿಮೆಯ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ, ಮಾದಪ್ಪನಿಗೆ ಹರಕೆಯ ರೂಪದಲ್ಲಿ ನಗದು ಮತ್ತು ಚಿನ್ನಾಭರಣಗಳನ್ನು ಸಲ್ಲಿಸಿದ್ದಾರೆ.
ನೇಪಾಳ ದೇಶದ ಭಕ್ತರು ಸಹ ಮಾದಪ್ಪನ ದರ್ಶನ ಪಡೆದು ಮಾದಪ್ಪನಿಗೆ ಕಾಣಿಕೆಯನ್ನು ಅರ್ಪಿಸಿದ್ದಾರೆ.