ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಳೆಯಿಂದ ಐದು ದಿನಗಳ ಕಾಲ ಮಹಾಶಿವರಾತ್ರಿ ಜಾತ್ರಾ ಮಹೋತ್ಸ ನಡೆಯಲಿದ್ದು, ಈಗಾಗಲೇ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಚಾಮರಾಜನಗರ, ಮೈಸೂರು, ಮಂಡ್ಯ,ರಾಮನಗರ,ಬೆಂಗಳೂರು ಗ್ರಾಮಾಂತರ ಭಾಗ ಸೇರಿ ಲಕ್ಷಾಂತರ ಜನ ಭಕ್ತರು ಆಗಮಿಸುವ ನಿರೀಕ್ಷೆಇರುವ ಹಿನ್ನೆಲೆ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದಿಂದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಇನ್ನು ಬರುವಂತಹ ಭಕ್ತರಿಗೆ ಮೂಲಭೂತ ಸೌಕರ್ಯಗಳಿಗೆ ತೊಂದರೆ ಆಗದಂತೆ ಪ್ರಾಧಿಕಾರದಿಂದ ಸಕಲ ವ್ಯವಸ್ಥೆಯಾಗಿದ್ದು, ಜಾತ್ರಾ ಮಹೋತ್ಸವ ಸಮಯದಲ್ಲಿ ದ್ವಿಚಕ್ರ ವಾಹಗಳಿ ನಿರ್ಬಂಧವಿಧಿಸಲಾಗಿದೆ. ಅಲ್ಲದೆ ಭದ್ರತೆಗಾಗಿ 400 ಕ್ಕೂ ಹೆಚ್ಚು ಪೋಲಿಸರು, 400 ಕ್ಕೂ ಹೆಚ್ಚು ಗೃಹರಕ್ಷಕ ದಳ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.